ನಾಡಿನ ಹಿರಿಯ ಸಾಹಿತಿ ಚಂಪಾ ಇನ್ನಿಲ್ಲ..!

suddionenews
0 Min Read

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕವಿ, ನಾಟಕಕಾರ, ಹಿರಿಯ ಸಾಹಿತಿ ಪ್ರೋ. ಚಂದ್ರಶೇಖರ್ ಪಾಟೀಲ ಇಂದು ನಿಧನರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂಪಾ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ಚಂಪಾ ಅವರಿಗೆ 82 ವರ್ಷ ವಯಸ್ಸಾಗಿತ್ತು. ಆದರೆ ಅವರು ಇಂದು ನಿಧನರಾಗಿರುವುದು ಇಡೀ ಸಾಹಿತ್ಯ ಲೋಕಕ್ಕೆ ನಷ್ಟವಾಗಿದೆ. ಅವರ ನಿಧನದಿಂದ ಇಡೀ ರಾಜ್ಯವೇ ದುಃಖತಪ್ತದಲ್ಲಿದೆ.

ಚಂಪಾ ಹುಟ್ಟಿದ್ದು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತಿಮತ್ತೂರಿನಲ್ಲಿ. ಅವರು ಕನ್ನಡ ನಾಡಿನ ಕವಿಯಾಗಿ, ನಾಟಕಕಾರನಾಗಿ, ಸಂಘಟಕಾರನಾಗಿ, ಸಂಘಟನಕಾರರಾಗಿ, ಪತ್ರಿಕಾ ಸಂಪಾದಕರಾಗಿ, ಆಡಳಿತಗಾರರಾಗಿ, ಕನ್ನಡಪರ ಹೋರಾಟಗಾರರಾಗಿ ಗುರುತಿಸಿಕೊಂಡವರು.

Share This Article
Leave a Comment

Leave a Reply

Your email address will not be published. Required fields are marked *