Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದೆಲ್ಲೆಡೆ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ ಹವಮಾನ ಇಲಾಖೆ. ಈಗಾಗಲೇ ಮಳೆ ಆರಂಭವಾದಾಗಿನಿಂದ ವಾತಾವರಣ ತಂಪಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನಲ್ಲಿ ಮಳೆ ಬೀಳಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ಈ ಸಂಬಂಧ ಈಗಾಗಲೇ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಶಿವಮೊಗ್ಗ, ತುಮಕೂರು, ವಿಜಯನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆರಂಭದಲ್ಲಿಯೇ ಉತ್ತಮ ಮಳೆಯಾಗುತ್ತಿರುವ ಕಾರಣ ರೈತರು ಈಗಾಗಲೇ ಬಿತ್ತನೆಯ ಕಾರ್ಯ ಶುರು ಮಾಡಿದ್ದಾರೆ. ಹೊಲಗಳಿಗೆ ಎತ್ತುಗಳನ್ನು ಹೊಡೆದುಕೊಂಡು ಹೋಗಿ ಭೂಮಿಯನ್ನು ಹದ ಮಾಡುತ್ತಿದ್ದಾರೆ. ಕಳೆದ ವರ್ಷ ಮುಂಗಾರು, ಹಿಂಗಾರು ಕೈಕೊಟ್ಟ ಹಿನ್ನೆಲೆ ಬರ ಸೃಷ್ಠಿಯಾಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಮಳೆ ಜೋರಾಗಿರುವ ಕಾರಣ ರೈತರಲ್ಲಿ ಭರವಸೆ ಮೂಡಿದೆ. ಉತ್ತಮ ಮಳೆಯ ಜೊತೆಗೆ, ಬೆಳೆಯೂ ಆಗುವ ವಿಶ್ವಾಸದಲ್ಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

120 ವರ್ಷಗಳ ಇತಿಹಾಸ ಇರುವ ರೋಟರಿ ಸಂಸ್ಥೆಯ ಮೂಲ ಉದ್ದೇಶ ಸೇವೆ : ರೊ.ಪಿ.ಹೆಚ್.ಎಫ್. ಎಂ.ಕೆ.ರವೀಂದ್ರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.03 : : ಕೇವಲ ನಾಲ್ಕು ಸದಸ್ಯರಿಂದ 1905 ರಲ್ಲಿ ಆರಂಭಗೊಂಡ ರೋಟರಿ ಸಂಸ್ಥೆ 119

ಶಾಸಕ ಎನ್.ವೈ.ಗೋಪಾಕೃಷ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ : ಶುಭಕೋರಿದ ಕಾಂಗ್ರೆಸ್ ಮುಖಂಡರು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.03 : ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಕೃಷ್ಣರವರಿಗೆ ಬೃಹದಾಕಾರವಾದ ಹಾರ ಹಾಕಿ ಕಾಂಗ್ರೆಸ್‍ನಿಂದ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಲಾಯಿತು.

ತುರುವನೂರು ರಸ್ತೆಯಲ್ಲಿ ಡಿವೈಡರ್ ತೆರವು, ಚಳ್ಳಕೆರೆ ಗೇಟ್ ನಲ್ಲಿ ಹೊಸ ಸಂಚಾರಿ ವೃತ್ತ ನಿರ್ಮಾಣ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಜು. 03:   ನಗರದ ಸಂಚಾರ ದಟ್ಟಣೆ ಹಾಗೂ ಸಮಸ್ಯೆ ಕುರಿತು ಸಂಚಾರ ಠಾಣೆ ಪೊಲೀಸರು ಸಮೀಕ್ಷೆ ನಡೆಸಿ,  ಪರಿಹಾರಕ್ಕಾಗಿ ಸೂಕ್ತ ವರದಿ ಸಿದ್ಧಪಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ, ಸಾಧಕ

error: Content is protected !!