ಬೆಂಗಳೂರು: ಚುಮು ಚುಮು ಚಳಿಯಲ್ಲಿ ನಡುಗುತ್ತಿದ್ದ ಜನತೆಗೆ ವರುಣರಾಯ ದರ್ಶನ ಕೊಟ್ಟಿದ್ದಾನೆ. ರಾಜ್ಯಾದ್ಯಂತ ಅಲ್ಲಲ್ಲಿ ಕೊಂಚ ಮಳೆಯಾಗಿದೆ. ತುಂತುರು ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಎಲ್ಲೆಡೆ ತುಂತುರು ಮಳೆ ಸುರಿದಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ಶ್ರೀಲಂಕಾದ ದಕ್ಷಿಣ ಭಾಗದಿಂದ ತುಳುನಾಡಿನ ಉತ್ತರ ಕರಾವಳಿ ಕಡೆಗೆ ಸೈಕ್ಲೋನ್ ಎದ್ದಿದೆ. ಹೀಗಾಗಿ ಮುಂದಿನ 24ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡು ಭಾಗದಲ್ಲಿ ಮೋಡಕವಿದ ವಾತಾವರಣ ಹಾಗೂ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.

ತಮಿಳುನಾಡಿನಾದ್ಯಂತ ಭಾರೀ ಮಳೆಯಾಗಲಿದೆ. ಚಳಿಯ ಜೊತೆ ಜೊತೆಗೆ ಮಳೆಯೂ ಕಾಣಿಸಿಕೊಳ್ಳುತ್ತಿದ್ದು, ಜನ ಹೊರಗೆ ಬರುವುದಕ್ಕೇನೆ ಸೋಮಾರಿತನವನ್ನಾಗಿಸುತ್ತಿದೆ. ಇನ್ನು ಕೆಲ ದಿನಗಳ ಕಾಲ ತುಂತುರು ಮಳೆ ಮುಂದುವರೆಯಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














