Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದ ಹಲವೆಡೆ ಮಳೆ ಸಾಧ್ಯತೆ…!

---Advertisement---

 

ಬೆಂಗಳೂರು: ಚುಮು ಚುಮು ಚಳಿಯಲ್ಲಿ ನಡುಗುತ್ತಿದ್ದ ಜನತೆಗೆ ವರುಣರಾಯ ದರ್ಶನ ಕೊಟ್ಟಿದ್ದಾನೆ. ರಾಜ್ಯಾದ್ಯಂತ ಅಲ್ಲಲ್ಲಿ ಕೊಂಚ ಮಳೆಯಾಗಿದೆ. ತುಂತುರು ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಎಲ್ಲೆಡೆ ತುಂತುರು ಮಳೆ ಸುರಿದಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ಶ್ರೀಲಂಕಾದ ದಕ್ಷಿಣ ಭಾಗದಿಂದ ತುಳುನಾಡಿನ ಉತ್ತರ ಕರಾವಳಿ ಕಡೆಗೆ ಸೈಕ್ಲೋನ್ ಎದ್ದಿದೆ. ಹೀಗಾಗಿ ಮುಂದಿನ 24ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡು ಭಾಗದಲ್ಲಿ ಮೋಡಕವಿದ ವಾತಾವರಣ ಹಾಗೂ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.

ತಮಿಳುನಾಡಿನಾದ್ಯಂತ ಭಾರೀ ಮಳೆಯಾಗಲಿದೆ. ಚಳಿಯ ಜೊತೆ ಜೊತೆಗೆ ಮಳೆಯೂ ಕಾಣಿಸಿಕೊಳ್ಳುತ್ತಿದ್ದು, ಜನ ಹೊರಗೆ ಬರುವುದಕ್ಕೇನೆ ಸೋಮಾರಿತನವನ್ನಾಗಿಸುತ್ತಿದೆ. ಇನ್ನು ಕೆಲ ದಿನಗಳ ಕಾಲ ತುಂತುರು ಮಳೆ ಮುಂದುವರೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment