Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಇನ್ನು 2 ದಿನ ಮಳೆಯಾಗುವ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ

---Advertisement---

ಬೆಂಗಳೂರು: ಸಂಜೆ ವೇಳೆಗೆ ರಾಜಧಾನಿಯಲ್ಲಿ ಮಳೆಯೂ ಜೋರಾಗಿ ಬಂದಿದೆ. ಇದ್ದಕ್ಕಿದ್ದಂತೆ ಸುರಿದ ಬಾರಿ ಮಳೆಗೆ ವಾಹನ ಸವಾರರಿಗೆ ಕೊಂಚ ಸಮಸ್ಯೆಯಾಗಿದೆ. ಸ್ವಲ್ಪ ಸಮಯದಲ್ಲಿಯೇ ಜೋರು ಮಳೆ ಕಡಿಮೆಯಾಗಿದೆ. ಹವಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಇಮ್ಮು ಎರಡು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ ಎನ್ನಲಾಗಿದೆ.

ಇಂದು ಸಿಲಿಕಾನ್ ಸಿಟಿ ಬೆಂಗಳೂರು ಮಾತ್ರವಲ್ಲದೆ ನೆಲಮಂಗಲದ ಅಕ್ಕ ಪಕ್ಕದಲ್ಲೂ ಮಳೆಯಾಗಿದೆ. ಇನ್ನು ಸಿಟಿಯಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಹಲವೆಡೆ ಮಳೆಯಿಂದಾಗಿ ಮರಗಿಡಗಳು ಉರುಳಿದೆ. ಇದರಿಂದ ಹಲವರಿಗೆ ತೊಂದರೆಯಾಗಿದೆ. ಇನ್ನು ವಾಹನಗಳ ಮೇಲು ಮರದ ಕೊಂಬೆಗಳು ಬಿದ್ದು ಜಖಂ ಆಗಿವೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಇನ್ನು ಎರಡು ದಿನ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಬಿರು ಬೇಸಿಗೆಯ ನಡುವೆಯೂ ಮಳೆಗಾಲ ಆರಂಭವಾಗಿದ್ದು, ಅಲ್ಲಲ್ಲಿ ಮಳೆಯಾಗುತ್ತಿದ್ದು, ರೈತರು ಬೆಳೆ ಬೆಳಯಲು ತಯಾರಿ ನಡೆಸುತ್ತಿದ್ದಾರೆ. ಮಳೆ ಇನ್ನು ಮುಂದುವರೆಯುವ ಕಾರಣ ಹೊರ ಹೋಗುವವರು ಮುನ್ನೆಚ್ಚರಿಕೆವಹಿಸಬೇಕಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...