Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕ್ಯೂಟ್ ಕಪಲ್ ಆಗಿದ್ದ ಚಂದನ್ ಶೆಟ್ಟಿ-ನಿವೇದಿತಾ ಗೌಡ ಡಿವೋರ್ಸ್ : ಶಾಕಿಂಗ್ ನ್ಯೂಸ್

---Advertisement---

ಕನ್ನಡ ಇಂಡಸ್ಟ್ರಿಯಲ್ಲಿ ಶಾಕಿಂಗ್ ನ್ಯೂಸ್ ಒಂದು ಬಂದಿದೆ. ಕ್ಯೂಟ್ ಕಪಲ್ ರೀತಿ ಕಾಣಿಸಿಕೊಂಡಿದ್ದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಡಿವೋರ್ಸ್ ಪಡೆದಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದೆ. ಇಬ್ಬರು ಸಮ್ಮತಿ ಮೇರೆಗೆ ಡಿವೋರ್ಸ್ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ನಲ್ಲಿದ್ದಾಗ ಲವ್ ಮಾಡಿ, ಮದುವೆಯೂ ಆಗಿದ್ದರು. ನಾಲ್ಕು ವರ್ಷ ದಾಂಪತ್ಯ ಜೀವನವನ್ನು ನಡೆಸಿದ್ದರು. ನಿವೇದಿತಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದರು. 2019ರ ಯುವ ದಸರಾದಲ್ಲಿ ತುಂಬಿದ ವೇದಿಕೆ ಮೇಲೆ ಪ್ರಪೋಸ್ ಮಾಡಿದ್ದು, ಸಾಕಷ್ಟು ಸುದ್ದಿಯಾಗಿತ್ತು. ಇಬ್ಬರ ನಡುವೆ ಸಾಕಷ್ಟು ಅನ್ಯೋನ್ಯತೆ ಇತ್ತು. ಆದರೆ ದಿಢೀರನೇ ಡಿವೋರ್ಸ್ ಆಗಿರುವುದು ಅದೆಷ್ಟೋ ಜನಕ್ಕೆ ನಂಬಲು ಅಸಾಧ್ಯವಾದಂತೆ ಆಗಿದೆ.

ಇಬ್ಬರ ಡಿವೋರ್ಸ್ ಗೆ ಫ್ಯಾಮಿಲಿ ಕೋರ್ಟ್ ಅನುಮತಿ ನೀಡಿದೆ. ಪರಸ್ಪರ ಒಪ್ಪಂದದ ಮೇರೆಗೆ ಡಿವೋರ್ಸ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಮೂರು ಅಂಶಗಳನ್ನು ಉಲ್ಲೇಖಿಸಿದ್ದಾರೆ.
*ನಮ್ಮ ಕರಿಯರ್ ಮೇಲೆ ಗಮನ ಹರಿಸಲು ಬಯಸಿದ್ದೇವೆ
* ನಿವೇದಿತಾ ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆ ಹೊರಟಿದ್ದಾರೆ
* ಕೆಲ ಭಿನ್ನಾಭಿಪ್ರಾಯಗಳ ಬಗ್ಗೆಯೂ ಉಲ್ಲೇಖಿಸಲಾಗಿದೆ

ವಿಚಾರಣೆ ವೇಳೆ ನ್ಯಾಯಾಧೀಶರು ಇಬ್ಬರನ್ನು ಕರೆದು ಕೇಳಿದ್ದಾರೆ. ಪರಸ್ಪರ ಒಪ್ಪಿಗೆಯನ್ನು ಸೂಚಿಸಿದ್ದಾರೆ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಮಿಡಿಯೇಷನ್‌ನಲ್ಲಿ ಡಿವೋರ್ಸ್ ಬಗ್ಗೆ ಒಪ್ಪಂದವಾಗಿದೆ. ಅದರ ಅಗ್ರಿಮೆಂಟ್ ಅನ್ನು ನ್ಯಾಯಾಧೀಶರ ಮುಂದೆ ಸಲ್ಲಿಕೆ ಮಾಡಲಾಗಿದ್ದು, ಅವರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಡಿವೋರ್ಸ್ ಕಾಪಿ ಬಂದ ಬಳಿಕ ಅಧಿಕೃತವಾಗಿ ಡಿವೋರ್ಸ್ ಆಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment