Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಂದ್ರಶೇಖರ್ ಸ್ವಾಮೀಜಿ ವರ್ಸಸ್ ಸಚಿವ ರಾಜಣ್ಣ : ತಾರಕ್ಕೇರಿದ ಮಾತುಗಳು..!

---Advertisement---

 

ತುಮಕೂರು: ನಿನ್ನೆ ಕೆಂಪೇಗೌಡ ಜಯಂತಿಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಸಿಎಂ ಹುದ್ದೆಯ ಬಗ್ಗೆ ಮಾತನಾಡಿದ್ದರು. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಲುವಂತೆ ಸಿದ್ದರಾಮಯ್ಯ ಅವರ ಬಳಿ ತುಂಬಿದ ವೇದಿಕೆಯಲ್ಲಿ ಮನವಿ ಮಾಡಿದ್ದರು. ಅದೀಗ ಸಿದ್ದರಾಮಯ್ಯ ಬಣದಲ್ಲಿ ಬಾರೀ ಚರ್ಚೆಯಾಗಿದ್ದು, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸ್ವಾಮೀಜಿ ವಿರುದ್ಧ ಆಕ್ರೋಶಗೊಂಡಿದ್ದಾರೆ‌.

‘ದೇಶದಲ್ಲಿ ಬಹಳ ಜನ ಸ್ವಾಮೀಜಿಗಳು ಇದ್ದಾರೆ. ನನಗೆ ಮಠ ಮಾಡಿಕೊಡುತ್ತೀನಿ ಅಂತ ಒಳ್ಳೆಯ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ನಾನು ಪರಿಶೀಲನೆ ಮಾಡ್ತೀನಿ. ಬೆವರು ಸುರಿಸದೆ ಜೀವನ ಮಾಡುವಂತಹ ಸ್ವಾಮೀಜಿಗಳು ಸಲಹೆ ನೀಡಿದ್ದಾರೆ. ಅದನ್ನು ನಾನು ಪರಿಶೀಲನೆ ಮಾಡ್ತೀನಿ. ಸ್ವಾಮೀಜಿ ಸುಲಭವಾಗಿ ಜೀವನ ನಡೆಸುವ ಮಾರ್ಗ ತಿಳಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ‌. ನಾವೂ ನೋಡಿದ ಸ್ವಾಮೀಜಿ ಸಮಾಜಕ್ಕೆ ಒಳಿತನ್ನು ಬಯಸುವವರು. ಆದರೆ ಹೀಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು, ಸರಿಯಲ್ಲ ಎಂದು ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ರಾಜಣ್ಣ ಅವರ ಬಗ್ಗೆ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದು ಹೀಗೆ, ರಾಜಣ್ಣ ಆತ್ಮಪೂರ್ತಿಯಾಗಿ ಹೆಂಡತಿ, ಮನೆ, ಮಕ್ಕಳು ಎಲ್ಲವನ್ನು ಬಿಟ್ಟು ಬಂದರೆ ಅವರಿಗೊಂದು ಮಠ ಮಾಡಿಕೊಡುವುದು ನಮ್ಮ ಜವಾಬ್ದಾರಿ. ಆಯ್ತು ಅದನ್ನು ಪೀಠವನ್ನು ಕೊಡ್ತೀನಿ. ಅವರು, ತರ್ಲೆ, ಅವರ ಮಾತಲ್ಲಿ ತೂಕ ಇಲ್ಲ ಏನಿಲ್ಲ. ಅವನಿಗೆ ಯೋಗ್ಯತೆಯೇ ಇಲ್ಲ ಮಾತನಾಡುವುದಕ್ಕೆ. ಅವನ್ನ ನಾನು ನೋಡಿಲ್ಲ. ಅವನು ಯಾರು ಗೊತ್ತಿಲ್ಲ. ಚಪಲವಾದ ಬಾಯಿ ಏನಾದ್ರೂ ಹೊದರಬೇಕು ಹೊದರಿರ್ತಾನೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment