Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಂದ್ರಯಾನ 3: ಚಂದ್ರಯಾನದ ಭವ್ಯ ಯಶಸ್ಸಿನಿಂದ ನನ್ನ ಜೀವನ ಧನ್ಯವಾಯಿತು : ಪ್ರಧಾನಿ ಮೋದಿ

Facebook
Twitter
Telegram
WhatsApp

 

ಬಾಹ್ಯಾಕಾಶದಲ್ಲಿ ಭಾರತ ರಾರಾಜಿಸುತ್ತಿದೆ. ಯಾವುದೇ ದೇಶಕ್ಕೆ ಅಸಾಧ್ಯವಾಗದ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಇಸ್ರೋ ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿಸಿದೆ. ಚಂದ್ರಯಾನ 3 ಉಡಾವಣೆ ಯಶಸ್ವಿ ಕ್ಷಣ ಇಡೀ ಭಾರತವೇ ರೋಮಾಂಚನಗೊಂಡಿತ್ತು. ಭಾರತ ಹಾಗೂ ಇಡೀ ವಿಶ್ವವೇ ಕುತೂಹಲದಿಂದ ಕಾಯುತ್ತಿದ್ದ ಅತ್ಯಂತ ಪ್ರತಿಷ್ಠಿತ ಚಂದ್ರಯಾನ 3 ಉಡಾವಣೆ ಯಶಸ್ವಿಯಾಗಿದೆ.

ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳೊಂದಿಗೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಅಭೂತಪೂರ್ವ ಕ್ಷಣವನ್ನು ವೀಕ್ಷಿಸಿದರು. ಚಂದ್ರಯಾನ 3 ಲ್ಯಾಂಡರ್ ಚಂದ್ರನಲ್ಲಿ ಯಶಸ್ವಿಯಾಗಿ ಮುಟ್ಟಿದ ಕ್ಷಣವನ್ನು ಪ್ರಧಾನ ಮಂತ್ರಿಗಳು ಇಸ್ರೋ ವಿಜ್ಞಾನಿಗಳೊಂದಿಗೆ ಆಚರಿಸಿದರು.

ಚಂದ್ರನ ಮೇಲೆ ಚಂದ್ರಯಾನ 3 ಇಳಿಯುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಯಶಸ್ವಿ ಉಡಾವಣೆಯಾದ ತಕ್ಷಣ ಇಸ್ರೋ ವಿಜ್ಞಾನಿಗಳನ್ನು ಚಪ್ಪಾಳೆ ತಟ್ಟಿ ಅಭಿನಂದಿಸಿದರು. ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಈ ಯಶಸ್ಸು ಇಸ್ರೋ ವಿಜ್ಞಾನಿಗಳ ಅವಿರತ ಶ್ರಮಕ್ಕೆ ಸಿಕ್ಕ ಫಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಐತಿಹಾಸಿಕ ಘಟನೆಗಳನ್ನು ಕಂಡು ಹೆಮ್ಮೆ ಪಡುತ್ತೇನೆ ಎಂದರು.

ಚಂದ್ರಯಾನ ಉಡಾವಣೆಯಲ್ಲಿ ಭಾಗಿಯಾದ ಇಸ್ರೋ ವಿಜ್ಞಾನಿಗಳು ಮತ್ತು ತಂಡಕ್ಕೆ ನನ್ನ ಅಭಿನಂದನೆಗಳು. ಈ ಅದ್ಭುತ ಕ್ಷಣಕ್ಕಾಗಿ ನಾನು ಹಲವು ವರ್ಷಗಳಿಂದ ಕಾಯುತ್ತಿದ್ದೆ.
140 ಕೋಟಿ ಭಾರತೀಯರು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದರು. ಪ್ರಪಂಚದ ಯಾವುದೇ ದೇಶಕ್ಕಿಂತ ಮೊದಲು ನಾವು ಚಂದ್ರನ ದಕ್ಷಿಣ ಧ್ರುವದ ಮೇಲೆ ಹೆಜ್ಜೆಯನ್ನಿಟ್ಟಿದ್ದೇವೆ.  ಚಂದ್ರಯಾನದ ಭವ್ಯ ಯಶಸ್ಸಿನಿಂದ ನನ್ನ ಜೀವನ ಧನ್ಯವಾಯಿತು. ಈ ಗೆಲುವು ದೇಶವೇ ಹೆಮ್ಮೆಪಡುವಂತ ಅಭೂತಪೂರ್ವ ಕ್ಷಣವಾಗಿದೆ.

ಚಂದ್ರಯಾನದ ಗೆಲುವು ನವ ಭಾರತದ ಗೆಲುವು. ಬ್ರಿಕ್ಸ್ ಸಭೆಗಳಲ್ಲಿ ಭಾಗವಹಿಸಲು ಹೋದರೂ ನನ್ನ ಮನಸ್ಸು ಚಂದ್ರಯಾನದತ್ತಲೇ ಇತ್ತು. ಹಲವು ವರ್ಷಗಳಿಂದ ಈ ಕ್ಷಣಕ್ಕಾಗಿ ಕಾಯುತ್ತಿದ್ದೇನೆ. ಈ ಗೆಲುವಿನೊಂದಿಗೆ ಭಾರತ ಹೊಸ ಇತಿಹಾಸ ನಿರ್ಮಿಸಿದೆ. ಇದು ಅಮೃತ ಯುಗದಲ್ಲಿ ಭಾರತದ ಮೊದಲ ಪ್ರಮುಖ ವಿಜಯವಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಈವರೆಗೆ ಯಾವ ದೇಶವೂ ಸಾಧಿಸದ ಯಶಸ್ಸನ್ನು ನಾವು ಸಾಧಿಸಲು ಇಸ್ರೋ ವಿಜ್ಞಾನಿಗಳ ಪರಿಶ್ರಮವೇ ಕಾರಣ. ಭಾರತ ಸಾಧಿಸಿರುವ ಈ ಅದ್ಭುತ ಗೆಲುವು ಭಾರತಕ್ಕೆ ಮಾತ್ರವಲ್ಲ. ಸಮಸ್ತ ಮನುಕುಲಕ್ಕೆ ಸೇರಿದ್ದು ಎಂದು ಮೋದಿ ಹೇಳಿದರು.

ಈ ಯಶಸ್ಸಿನೊಂದಿಗೆ ಚೀನಾ, ರಷ್ಯಾ ಮತ್ತು ಅಮೆರಿಕದ ನಂತರ ಚಂದ್ರನ ಮೇಲೆ ಕಾಲಿಟ್ಟ ನಾಲ್ಕನೇ ದೇಶವಾಯಿತು. ಆದರೆ ದಕ್ಷಿಣ ಧ್ರುವಕ್ಕೆ ಕಾಲಿಟ್ಟ ಮೊದಲ ದೇಶ ಎಂಬ ಹೆಗ್ಗಳಿಕೆ ಭಾರತಕ್ಕಿದೆ. 2019 ರಲ್ಲಿ ಚಂದ್ರಯಾನ 2 ವಿಫಲವಾದ ನಂತರ, ಇಸ್ರೋ ಚಂದ್ರಯಾನ 3 ಅನ್ನು ಸವಾಲಾಗಿ ತೆಗೆದುಕೊಂಡಿತು. ರಷ್ಯಾದ ಲೂನಾ 25 ರ ಇತ್ತೀಚಿನ ವೈಫಲ್ಯದ ನಂತರ, ಇಡೀ ಜಗತ್ತು ಭಾರತದ ಚಂದ್ರಯಾನ 3 ಅನ್ನು ಕುತೂಹಲದಿಂದ ಕಾಯುತ್ತಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!