Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಂದ್ರಯಾನ 3: ಚಂದ್ರಯಾನದ ಭವ್ಯ ಯಶಸ್ಸಿನಿಂದ ನನ್ನ ಜೀವನ ಧನ್ಯವಾಯಿತು : ಪ್ರಧಾನಿ ಮೋದಿ

---Advertisement---

 

ಬಾಹ್ಯಾಕಾಶದಲ್ಲಿ ಭಾರತ ರಾರಾಜಿಸುತ್ತಿದೆ. ಯಾವುದೇ ದೇಶಕ್ಕೆ ಅಸಾಧ್ಯವಾಗದ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಇಸ್ರೋ ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿಸಿದೆ. ಚಂದ್ರಯಾನ 3 ಉಡಾವಣೆ ಯಶಸ್ವಿ ಕ್ಷಣ ಇಡೀ ಭಾರತವೇ ರೋಮಾಂಚನಗೊಂಡಿತ್ತು. ಭಾರತ ಹಾಗೂ ಇಡೀ ವಿಶ್ವವೇ ಕುತೂಹಲದಿಂದ ಕಾಯುತ್ತಿದ್ದ ಅತ್ಯಂತ ಪ್ರತಿಷ್ಠಿತ ಚಂದ್ರಯಾನ 3 ಉಡಾವಣೆ ಯಶಸ್ವಿಯಾಗಿದೆ.

ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳೊಂದಿಗೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಅಭೂತಪೂರ್ವ ಕ್ಷಣವನ್ನು ವೀಕ್ಷಿಸಿದರು. ಚಂದ್ರಯಾನ 3 ಲ್ಯಾಂಡರ್ ಚಂದ್ರನಲ್ಲಿ ಯಶಸ್ವಿಯಾಗಿ ಮುಟ್ಟಿದ ಕ್ಷಣವನ್ನು ಪ್ರಧಾನ ಮಂತ್ರಿಗಳು ಇಸ್ರೋ ವಿಜ್ಞಾನಿಗಳೊಂದಿಗೆ ಆಚರಿಸಿದರು.

ಚಂದ್ರನ ಮೇಲೆ ಚಂದ್ರಯಾನ 3 ಇಳಿಯುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಯಶಸ್ವಿ ಉಡಾವಣೆಯಾದ ತಕ್ಷಣ ಇಸ್ರೋ ವಿಜ್ಞಾನಿಗಳನ್ನು ಚಪ್ಪಾಳೆ ತಟ್ಟಿ ಅಭಿನಂದಿಸಿದರು. ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಈ ಯಶಸ್ಸು ಇಸ್ರೋ ವಿಜ್ಞಾನಿಗಳ ಅವಿರತ ಶ್ರಮಕ್ಕೆ ಸಿಕ್ಕ ಫಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಐತಿಹಾಸಿಕ ಘಟನೆಗಳನ್ನು ಕಂಡು ಹೆಮ್ಮೆ ಪಡುತ್ತೇನೆ ಎಂದರು.

ಚಂದ್ರಯಾನ ಉಡಾವಣೆಯಲ್ಲಿ ಭಾಗಿಯಾದ ಇಸ್ರೋ ವಿಜ್ಞಾನಿಗಳು ಮತ್ತು ತಂಡಕ್ಕೆ ನನ್ನ ಅಭಿನಂದನೆಗಳು. ಈ ಅದ್ಭುತ ಕ್ಷಣಕ್ಕಾಗಿ ನಾನು ಹಲವು ವರ್ಷಗಳಿಂದ ಕಾಯುತ್ತಿದ್ದೆ.
140 ಕೋಟಿ ಭಾರತೀಯರು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದರು. ಪ್ರಪಂಚದ ಯಾವುದೇ ದೇಶಕ್ಕಿಂತ ಮೊದಲು ನಾವು ಚಂದ್ರನ ದಕ್ಷಿಣ ಧ್ರುವದ ಮೇಲೆ ಹೆಜ್ಜೆಯನ್ನಿಟ್ಟಿದ್ದೇವೆ.  ಚಂದ್ರಯಾನದ ಭವ್ಯ ಯಶಸ್ಸಿನಿಂದ ನನ್ನ ಜೀವನ ಧನ್ಯವಾಯಿತು. ಈ ಗೆಲುವು ದೇಶವೇ ಹೆಮ್ಮೆಪಡುವಂತ ಅಭೂತಪೂರ್ವ ಕ್ಷಣವಾಗಿದೆ.

ಚಂದ್ರಯಾನದ ಗೆಲುವು ನವ ಭಾರತದ ಗೆಲುವು. ಬ್ರಿಕ್ಸ್ ಸಭೆಗಳಲ್ಲಿ ಭಾಗವಹಿಸಲು ಹೋದರೂ ನನ್ನ ಮನಸ್ಸು ಚಂದ್ರಯಾನದತ್ತಲೇ ಇತ್ತು. ಹಲವು ವರ್ಷಗಳಿಂದ ಈ ಕ್ಷಣಕ್ಕಾಗಿ ಕಾಯುತ್ತಿದ್ದೇನೆ. ಈ ಗೆಲುವಿನೊಂದಿಗೆ ಭಾರತ ಹೊಸ ಇತಿಹಾಸ ನಿರ್ಮಿಸಿದೆ. ಇದು ಅಮೃತ ಯುಗದಲ್ಲಿ ಭಾರತದ ಮೊದಲ ಪ್ರಮುಖ ವಿಜಯವಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಈವರೆಗೆ ಯಾವ ದೇಶವೂ ಸಾಧಿಸದ ಯಶಸ್ಸನ್ನು ನಾವು ಸಾಧಿಸಲು ಇಸ್ರೋ ವಿಜ್ಞಾನಿಗಳ ಪರಿಶ್ರಮವೇ ಕಾರಣ. ಭಾರತ ಸಾಧಿಸಿರುವ ಈ ಅದ್ಭುತ ಗೆಲುವು ಭಾರತಕ್ಕೆ ಮಾತ್ರವಲ್ಲ. ಸಮಸ್ತ ಮನುಕುಲಕ್ಕೆ ಸೇರಿದ್ದು ಎಂದು ಮೋದಿ ಹೇಳಿದರು.

ಈ ಯಶಸ್ಸಿನೊಂದಿಗೆ ಚೀನಾ, ರಷ್ಯಾ ಮತ್ತು ಅಮೆರಿಕದ ನಂತರ ಚಂದ್ರನ ಮೇಲೆ ಕಾಲಿಟ್ಟ ನಾಲ್ಕನೇ ದೇಶವಾಯಿತು. ಆದರೆ ದಕ್ಷಿಣ ಧ್ರುವಕ್ಕೆ ಕಾಲಿಟ್ಟ ಮೊದಲ ದೇಶ ಎಂಬ ಹೆಗ್ಗಳಿಕೆ ಭಾರತಕ್ಕಿದೆ. 2019 ರಲ್ಲಿ ಚಂದ್ರಯಾನ 2 ವಿಫಲವಾದ ನಂತರ, ಇಸ್ರೋ ಚಂದ್ರಯಾನ 3 ಅನ್ನು ಸವಾಲಾಗಿ ತೆಗೆದುಕೊಂಡಿತು. ರಷ್ಯಾದ ಲೂನಾ 25 ರ ಇತ್ತೀಚಿನ ವೈಫಲ್ಯದ ನಂತರ, ಇಡೀ ಜಗತ್ತು ಭಾರತದ ಚಂದ್ರಯಾನ 3 ಅನ್ನು ಕುತೂಹಲದಿಂದ ಕಾಯುತ್ತಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment