Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಂದ್ರಯಾನ-3 ಯಶಸ್ಸು : ಚಿತ್ರದುರ್ಗದಲ್ಲಿ ವಾಸವಿ ಕ್ಲಬ್ ಸೇರಿದಂತೆ ಶಾಲಾ ಕಾಲೇಜುಗಳಲ್ಲಿ ಸಂಭ್ರಮಾಚರಣೆ…!

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆ.24 : ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿದಿರುವುದಕ್ಕೆ ವಾಸವಿ ಕ್ಲಬ್ ಹಾಗೂ ಅವೋಪ, ವಾಸವಿ ವಿದ್ಯಾಸಂಸ್ಥೆ, ಆರ್ಯವೈಶ್ಯ ಸಂಘದಿಂದ ಒನಕೆ ಒಬವ್ವ ವೃತ್ತದ ಮುಂಭಾಗ ಗುರುವಾರ ಸಂಭ್ರಮಿಸಿ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.

ವಾಸವಿ ಕ್ಲಬ್ ಅಧ್ಯಕ್ಷರಾದ ಎಲ್.ಆರ್.ಲಕ್ಷ್ಮಣ್, ಅವೋಪ ಅಧ್ಯಕ್ಷ ಪಿ.ಎಲ್.ಸುರೇಶ್‍ರಾಜು ಇವರುಗಳು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ನೇತೃತ್ವದಲ್ಲಿ ವಿಜ್ಞಾನಿಗಳು ಚಂದ್ರನಲ್ಲಿ ನೌಕೆ ಇಳಿಸಿ ಇಡಿ ವಿಶ್ವವೇ ಭಾರತದ ಬಗ್ಗೆ ಹೆಮ್ಮೆ ಪಡುವಂತೆ ಶ್ರಮಿಸಿರುವುದು ದೊಡ್ಡ ಸಾಧನೆ ಎಂದು ಗುಣಗಾನ ಮಾಡಿದರು.

ತಿಪ್ಪೇಸ್ವಾಮಿ, ಲಿಂಗಂ ಶ್ರೀನಿವಾಸ್, ಎಸ್.ನಾಗರಾಜ್, ಕೋಟೇಶ್ವರಗುಪ್ತ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಸತ್ಯನಾರಾಯಣಶೆಟ್ಟಿ, ಕಾರ್ಯದರ್ಶಿ ಅಜಯ್‍ಕುಮಾರ್ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಚಿತ್ರದುರ್ಗ : ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಆಗಿರುವುದಕ್ಕೆ ಸಿ.ಎನ್.ಸಿ. ಪಿ.ಯು.ಕಾಲೇಜಿನಲ್ಲಿ ಗುರುವಾರ ಸಂಭ್ರಮಾಚರಿಸಲಾಯಿತು.ಕಾಲೇಜಿನ ಡೀನ್ ಗೋಪಾಲ್, ಪ್ರಾಚಾರ್ಯರಾದ ಬಿ.ನಾಗರಾಜ್, ಬೋಧಕ ವರ್ಗದವರು ಹಾಜರಿದ್ದು, ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು.

ಇಸ್ರೋ ಹೆಸರಿನಂತೆ ವಿದ್ಯಾರ್ಥಿಗಳು ಕುಳಿತು ಸಂಭ್ರಮಿಸಿದ್ದು, ವಿಶೇಷವಾಗಿತ್ತು.


ಚಂದ್ರಯಾನ 3 ಯಶಸ್ವಿಯಾಗುವ ಮೂಲಕ ಇಸ್ರೋ ಅದ್ಭುತ ಸಾಧನೆ ಮಾಡಿದೆ.  ಇಡೀ ವಿಶ್ವವೇ ಎದುರು ನೋಡುತ್ತಿದ್ದ ಚಂದ್ರಯಾನ 3 ಯಶಸ್ವಿಯಾಗಿದೆ. ಪ್ರದರ್ಶನಗಳ ಸಾಧನೆಗೆ ಬಾಪೂಜಿ ಸಮೂಹ ಸಂಸ್ಥೆ ಎಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಶುಭ ಕೋರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!