Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

Chandrayaan-3: ಉದ್ದೇಶಿತ ಮೂರು ಗುರಿಗಳಲ್ಲಿ ಎರಡು  ಈಡೇರಿವೆ : ಇಸ್ರೋ

---Advertisement---

ಸುದ್ದಿಒನ್

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ISRO) ಚಂದ್ರನನ್ನು ಅನ್ವೇಷಿಸುವ ಚಂದ್ರಯಾನ-3 ಪ್ರಯೋಗ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ‘ಚಂದ್ರಯಾನ-3’ (ಚಂದ್ರಯಾನ-3 ಮಿಷನ್)
(Chandrayaan-3 Mission)
ಉಡಾವಣೆಗೆ ಸಂಬಂಧಿಸಿದಂತೆ ಇಸ್ರೋ ತಿಳಿಸಿದೆ.

ಚಂದ್ರಯಾನ-3 ಮಿಷನ್‌ನ ಉದ್ದೇಶಿತ (ಚಂದ್ರಯಾನ 3 ಉದ್ದೇಶಗಳು) (Chandrayaan-3 Mission)
ಮೂರು ಗುರಿಗಳಲ್ಲಿ ಎರಡು ಉದ್ದೇಶಗಳು ಈಡೇರಿವೆ ಎಂದು ಶನಿವಾರ ಟ್ವಿಟರ್ ನಲ್ಲಿ (ಎಕ್ಸ್) ತಿಳಿಸಿದೆ.

ಮೊದಲನೆಯದು ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ (Vikram Lander)
ಅನ್ನು ಸುರಕ್ಷಿತವಾಗಿ ಇಳಿಸುವುದು. ಎರಡನೆಯದು ಚಂದ್ರನ ಮೇಲ್ಮೈ ಮೇಲೆ ಪ್ರಜ್ಞಾನ್ ರೋವರ್ (Pragyan Rover) ಅನ್ನು ಯಶಸ್ವಿಯಾಗಿ ಮುನ್ನಡೆಸುವುದು. ಈ ಎರಡೂ ಉದ್ದೇಶಗಳನ್ನು ಈಡೇರಿಸಿರುವುದಾಗಿ ಇಸ್ರೋ ತಿಳಿದಿದೆ.

ಇನ್ನೂ ಮೂರನೇ ಉದ್ದೇಶವಾದ ‘ವೈಜ್ಞಾನಿಕ ತನಿಖೆಗಳನ್ನು ನಡೆಸುವ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ ಮತ್ತು ಲ್ಯಾಂಡರ್ ಮತ್ತು ರೋವರ್‌ನಲ್ಲಿರುವ ಎಲ್ಲಾ ಪೇಲೋಡ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಅದು ಟ್ವೀಟ್ ಮಾಡಿದೆ. ಇದಕ್ಕೂ ಮೊದಲು ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈಯಲ್ಲಿ ಚಲಿಸುವ ಮತ್ತೊಂದು ವೀಡಿಯೊವನ್ನು ಬಿಡುಗಡೆ ಮಾಡಿತು. ವಿಕ್ರಮ್ ಲ್ಯಾಂಡರ್‌ನಿಂದ ರಾಂಪ್ ತೆರೆದ ನಂತರ ರೋವರ್ ಮೇಲ್ಮೈಯನ್ನು ತಲುಪುವ ವೀಡಿಯೊವನ್ನು ಈಗಾಗಲೇ ನಾವೆಲ್ಲರೂ ನೋಡಿದ್ದೇವೆ.

ರೋವರ್ ತನ್ನ ಚಕ್ರಗಳ ಮುದ್ರೆಯನ್ನು ಸೂರ್ಯನ ಬೆಳಕಿನಲ್ಲಿ ಬೂದು ಬಣ್ಣದಿಂದ ಹೊಳೆಯುತ್ತಿರುವ ಚಂದ್ರನ ಮೇಲ್ಮೈನಲ್ಲಿ ಸ್ಪಷ್ಟವಾಗಿ ಅಚ್ಚೊತ್ತಿದೆ. ಈ ರೋವರ್ 8 ಮೀಟರ್ ಕ್ರಮಿಸಿದೆ ಎಂದು ಇಸ್ರೋ ತಿಳಿಸಿದೆ.

ಅದರ ವಿಜ್ಞಾನ ಉಪಕರಣಗಳಾದ ಲೇಸರ್ ಇಂಡ್ಯೂಸ್ಡ್ ಬ್ರೇಕ್‌ಡೌನ್ ಸ್ಪೆಕ್ಟ್ರೋಸ್ಕೋಪ್ (LIBS) ಮತ್ತು ಆಲ್ಫಾ ಪಾರ್ಟಿಕಲ್ ಎಕ್ಸ್-ರೇ ಸ್ಪೆಕ್ಟ್ರೋಮೀಟರ್ (APXS) ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ.

ಮತ್ತೊಂದೆಡೆ, ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವ ಶಕ್ತಿ ಪಾಯಿಂಟ್’ ಎಂದು ಹೆಸರಿಸಿದ್ದಾರೆ.
ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಭೇಟಿ ಮಾಡಿ ಅಭಿನಂದಿಸಿದ ನಂತರ ಈ ಘೋಷಣೆ ಮಾಡಲಾಗಿದೆ.
ವೀಡಿಯೋವನ್ನು ಬಿಡುಗಡೆ ಮಾಡಿದ ನಂತರ, ಇಸ್ರೋ ‘ಪ್ರಗ್ಯಾನ್ ರೋವರ್ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಶಿವಶಕ್ತಿ ಪಾಯಿಂಟ್‌ನಲ್ಲಿ ಸುತ್ತುತ್ತಿದೆ’ ಎಂದು ಹೇಳಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment