Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಂದ್ರಯಾನ 3 : ಚಂದ್ರನ ಮೇಲೂ ಭಾರತ – ಚೀನಾ ಮುಖಾಮುಖಿಯಾಗಲಿದೆಯಾ..? ಇಲ್ಲಿದೆ ಆಸಕ್ತಿಕರ ಮಾಹಿತಿ…!

---Advertisement---

 

ಚಂದ್ರಯಾನ 3 ಸಕ್ಸಸ್ ಖುಷಿಯಲ್ಲಿ ಭಾರತ ತೇಲುತ್ತಿದೆ. ಇದರ ನಡುವೆ ಚಂದ್ರನ ಮೇಲೂ ಚೀನಾ ಭಾರತದ ಮೇಲೆ ಕಣ್ಣಿಟ್ಟಿದೆ ಎನ್ನಲಾಗಿದೆ. ಯಾಕಂದ್ರೆ ಚಂದ್ರನ ಅಂಗಳದಲ್ಲಿ ಚೀನಾ ಕಳುಹಿಸಿರುವ ರೋವರ್ ಭಾರತಕ್ಕೆ ಮುಖಾಮುಖಿಯಾಗಲಿದೆಯಾ ಎಂಬ ಪ್ರಶ್ನೆ ಎದುರಾಗಿದೆ.

ಇಸ್ರೋ ಸದ್ಯ ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಹಾಗೂ ಪ್ರಗ್ಯಾನ್ ರೋವರ್ ಚಲನೆಯತ್ತ ಗಮನ ನೀಡಿದೆ. ಇನ್ನು ಹತ್ತು ದಿನಗಳ ಕಾಲ ಮಾತ್ರ ಸಂಶೋಧನೆಗೆ ಅವಕಾಶವಿದೆ. ಯಾಕಂದ್ರೆ ಪ್ರಗ್ಯಾನ್ ರೋವರ್ ಹಾಗೂ ವಿಕ್ರಮ್ ಲ್ಯಾಂಡರ್ ಕಾರ್ಯನಿರ್ವಹಿಸೋದು ಸೂರ್ಯನ ಬೆಳಕಿನಿಂದ . ಇನ್ನು ಹತ್ತು ದಿನಗಳ ಬಳಿಕ ಚಂದ್ರನಲ್ಲಿ ಕತ್ತಲು ಆವರಿಸುತ್ತದೆ. -200 ಸೆಲ್ಸಿಯಸ್ ಗಿಂತ ಕಡಿಮೆ ತಾಪಮಾನ ಉಂಟಾಗುವ ಕಾರಣದಿಂದ ವಿಕ್ರಂ ಹಾಗೂ ಪ್ರಗ್ಯಾನ್ ನಿಷ್ಕ್ರೀಯಗೊಳ್ಳಲಿವೆ. ಹೀಗಾಗಿ ಅಷ್ಟರೊಳಗೆ ತನ್ನ ಸಂಶೋಧನೆಯನ್ನು ನಡೆಸಬೇಕಾಗಿದೆ.

ಇನ್ನು ಚಂದ್ರನ ಮೇಲೆ ಚೀನಾ 2019ರಲ್ಲಿಯೇ ತನ್ನ U2 2 ರೋವರ್ ಅನ್ನು ಲ್ಯಾಂಡ್ ಮಾಡಿತ್ತು. ಆದರೆ ಚಂದ್ರನ ಮೇಲೆ ಕತ್ತಲು ಆವರಿಸಿದಾಗ ಚೀನಾದ ರೋವರ್ ನಿಷ್ಕ್ರೀಯಗೊಂಡಿದೆ. ಆದ್ರೆ ಈಗ ಚಂದ್ರನ ಮೇಲೆ ಸೂರ್ಯನ ಕಿರಣಗಳು ಬೀಳುತ್ತಿರುವ ಕಾರಣ ಮತ್ತೆ ಸಕ್ರೀಯಗೊಳ್ಳಲಿದೆ. ಹೀಗಾಗಿ ಚಂದ್ರನ ಮೇಲೂ ಮುಖಾ ಮುಖಿಯಾಗಲಿದೆಯಾ ಎನ್ನಲಾಗುತ್ತಿದೆ. ಆದ್ರೆ ಇಸ್ರೋ ವಿಜ್ಞಾನಿಗಳ ಪ್ರಕಾರ ಭಾರತದ ಪ್ರಗ್ಯಾನ್​ ರೋವರ್ ಹಾಗೂ ಚೀನಾದ U2 2 ರೋವರ್ ನಡುವೆ 1948 ಕಿಲೋಮೀಟರ್​ ಅಂತರವಿದೆ ಎನ್ನಲಾಗಿದೆ. ಹೀಗಾಗಿ ಚೀನಾ ಮತ್ತು ಭಾರತದ ರೋವರ್ ಪರಸ್ಪರ ಭೇಟಿಯಾಗುವ ‌ಸಾಧ್ಯತೆ ಇಲ್ಲ ಎನ್ನಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment