Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚನ್ನಗಿರಿ ಪೊಲೀಸ್ ಠಾಣೆ ಧ್ವಂಸ : 23 ಜನ ಅರೆಸ್ಟ್..!

Facebook
Twitter
Telegram
WhatsApp

ದಾವಣಗೆರೆ: ಚನ್ನಗಿರಿಯ ಟಿಪ್ಪು ನಗರದ ಆದಿಲ್ ಎಂಬಾತನ ಲಾಕಪ್ ಡೆತ್ ಆರೋಪದ ಪ್ರಕರಣದಲ್ಲಿ ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 23 ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಚನ್ನಗಿರಿ ಟೌನ್ ನಿವಾಸಿಗಳೆಂದು ತಿಳಿದು ಬಂದಿದೆ. ಬಂಧಿತ 23 ಆರೋಪಿಗಳಿಗೆ ಚನ್ನಗಿರಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ‌ ಒಳಪಡಿಸಿದೆ.

ಯುವಕನ ಲಾಕಪ್ ಡೆತ್ ಆರೋಪದಿಂದ ರೊಚ್ಚಿಗೆದ್ದ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು. ಪೊಲೀಸ್ ಠಾಣೆಗೆ ಕಲ್ಲು ತೂರಾಟ ನಡೆಸಿದ್ದರು. ಸದ್ಯಕ್ಕೆ ಚನ್ನಗಿರಿ ಪಟ್ಟಣ ಸಹಜ ಸ್ಥಿತಿಯತ್ತ ಮರಳುತ್ತಿದ್ದರು, ಕಲ್ಲು ತೂರಾಟ ನಡೆದ ಆಯಾಕಟ್ಟಿನ ಪ್ರದೇಶದಲ್ಲಿ ಇನ್ನು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆದಿಲ್ ಶವ ಪರೀಕ್ಷೆಗೆ ಆಸ್ಒತ್ರೆಗೆ ರವಾನೆ ಮಾಡಲಾಗಿದೆ. ವರದಿ ಬಂದ ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ.

32 ವರ್ಷದ ಆದಿಲ್ ನನ್ನು ಓಸಿ ಕೇಸಿನಲ್ಲಿ ಅರೆಸ್ಟ್ ಮಾಡಲಾಗಿತ್ತು. ಪೊಲೀಸರ ವಶದಲ್ಲಿದ್ದಾಗಲೇ ಆದಿಲ್ ಸಾವನ್ನಪ್ಪಿದ್ದಾನೆ. ಪೊಲೀಸರೇ ಕೊಲೆ ಮಾಡಿದ್ದಾರೆಂದು ಆರೋಪಿಸಿ ಚನ್ನಗಿರಿ ಪೊಲೀಸ್ ಠಾಣೆಗೆ ಜನರು ಮುತ್ತುಗೆ ಹಾಕಿದ್ದರು. ಠಾಣೆ ಮುಂದೆ ಆದಿಲ್ ಮೃತದೇಹ ಇಟ್ಟುಕೊಂಎಉ ಸಾವಿರಾರು ಜನ ಪ್ರತಿಭಟನೆ ಕೂಡ ಮಾಡಿದ್ದರು. ಪ್ರತಿಭಟನಾಕಾರರು ಪೊಲೀಸ್ ಠಾಣೆಯನ್ನು ಧ್ವಂಸ ಮಾಡಿದ್ದಲ್ಲದೆ ದಾವಣಗೆರೆ ಎಸ್ಪಿ ಕಾರಿನ ಮೇಲೆ ಕಲ್ಲು ತೂರಾಟ ಕೂಡ ನಡೆಸಿದರು. ಈ ವೇಳೆ ಹಲವು ಪೊಲೀಸರಿಗೂ ಗಾಯವಾಗಿದೆ. ಆದಿಲ್ ನನ್ನು ಅರೆಸ್ಟ್ ಮಾಡಿದಾಗ ಪೊಲೀಸ್ ಠಾಣೆಯಲ್ಲಿ ಕೇವಲ ಏಳು ನಿಮಿಷಗಳ ಕಾಲ‌ ಮಾತ್ರ ಇದ್ದದ್ದು. ಈ ವೇಳೆ ಆದಿಲ್ ಗೆ ರಕ್ತದೊತ್ತಡ, ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆದರೆ ವೈದ್ಯರು ಪ್ರಾಥಮಿಕ ವರದಿ ನೀಡಿದ ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ

ರಾಜಕೀಯದಲ್ಲಿ ಮುಸ್ಲಿಂ ಸಮಾಜಕ್ಕೆ ಅಧಿಕಾರವಿಲ್ಲ, ಆದ್ಯತೆಯಿಲ್ಲ, ಮುಸ್ಲಿಮರು ಕೇವಲ ಮತ ನೀಡುವುದಕ್ಕಷ್ಟೆ ಸೀಮಿತ : ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಶಿಕ್ಷಣದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿರುವವರನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆಯಾಗುತ್ತದೆಂದು

Kamala Harris: ಅಮೇರಿಕಾ ಅಧ್ಯಕ್ಷ ಸ್ಥಾನದ ಸನಿಹದಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್..!

ಸುದ್ದಿಒನ್ : ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಕಾವು ಜೋರಾಗಿದೆ. ಅಧ್ಯಕ್ಷೀಯ ರೇಸ್‌ಗೆ ಅಂತಿಮವಾಗಿ ಯಾರು ನಿಲ್ಲುತ್ತಾರೆ ಮತ್ತು ಯಾರು ಯಾರನ್ನು ಎದುರಿಸುತ್ತಾರೆ ಎಂಬ ವಿಷಯ ತೀವ್ರ ಕುತೂಹಲ ಮೂಡಿಸಿದೆ. ಪ್ರಸ್ತುತ ಡೆಮಾಕ್ರಟಿಕ್

error: Content is protected !!