Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚನ್ನಪಟ್ಟಣ ಬೈ ಎಲೆಕ್ಷನ್ : ಡಿಕೆ ಶಿವಕುಮಾರ್ ಸ್ಪರ್ಧೆ : ಜನತೆ ಬಳಿ ಹೇಳಿದ್ದೇನು..?

ಡಿಕೆ ಶಿವಕುಮಾರ್
---Advertisement---

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ, ಈಗ ಕೇಂದ್ರ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಈಗ ತೆರವಾಗಿದೆ. ಶಾಸಕ ಸ್ಥಾನಕ್ಕೆ ಈಗ ಬೈ ಎಲೆಕ್ಷನ್ ನಡೆಯಲಿದೆ. ಈಗಾಗಲೇ ಬಿಜೆಪಿಯಿಂದ ಸಿಪಿವೈ ಯೋಗೀಶ್ವರ್ ಅವರು ಚನ್ನಪಟ್ಟಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರೆ, ಮಗನ ರಾಜಕೀಯ ಭವಿಷ್ಯದ ಯಶಸ್ಸಿಗಾಗಿ ಕುಮಾರಸ್ವಾಮಿ ಯೋಚನೆ ಮಾಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ನಿಖಿಲ್ ಅವರನ್ನು ನಿಲ್ಲಿಸಿ, ಒಮ್ಮೆಯಾದರೂ ಗೆಲ್ಲಿಸಬೇಕೆಂದ ಆಸೆ ಇಟ್ಟುಕೊಂಡಿದ್ದಾರೆ. ಇದೀಗ ಕಾಂಗ್ರೆಸ್ ನಲ್ಲೂ ಚನ್ನಪಟ್ಟಣವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಪ್ಲ್ಯಾನ್ ನಡೆಯುತ್ತಿದೆ. ಹೀಗಾಗಿ ನೇರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಕಣಕ್ಕೆ ಇಳಿದಿದ್ದಾರೆ.

ಇಂದು ಚನ್ನಪಟ್ಟಣಕ್ಕೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಅವರು, ಚನ್ನಪಟ್ಟಣದ ಜನತೆ ಕುರಿತು ಮಾತನಾಡಿದ್ದಾರೆ. ಈ ಕ್ಷೇತ್ರದ ಜನರ ಋಣ ತೀರಿಸುವುದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ಚನ್ನಪಟ್ಟಣದಲ್ಲಿ ಬದಲಾವಣೆ ತರಬೇಕು ಅಂತ ನಾನು ಬಂದಿದ್ದೇನೆ. ಬೆಂಗಳೂರಿನ ರೀತಿಯಲ್ಲಿ ರಾಮನಗರ ಅಭಿವೃದ್ಧಿ ಆಗಬೇಕು. ಇಲ್ಲಿಂದಲೇ ನನ್ನ ರಾಜಕೀಯದ ಹೊಸ ಅಧ್ಯಾಯವನ್ನು ಆರಂಭಿಸುತ್ತೇನೆ ಎಂದು ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಇನ್ನು ಈ ಬಾರಿಯ ಲೋಕಸಭೆಯಲ್ಲಿ ಡಿಕೆ ಸುರೇಶ್ ಸೋಲು ಅನುಭವಿಸಿರುವುದು ಕಾಂಗ್ರೆಸ್ ಗೆ ಮುಜುಗತವಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಗೂ ಅದು ಬೇಸರ ತರಿಸಿದೆ. ಈಗ ಚನ್ನಪಟ್ಟಣಕ್ಕೆ ಮತ್ತೆ ನಿಲ್ಲಿಸಿದರೆ, ಸೋಲು ಕಂಡರೆ ಇನ್ನಷ್ಟು ಮುಖಭಂಗವಾಗಲಿದೆ. ಹೀಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಉಪಚುನಾವಣೆಯ ಅಖಾಡಕ್ಕೆ ಇಳಿದಿದ್ದಾರೆ. ಚನ್ನಪಟ್ಟಣದಲ್ಲಿ ಗೆಲ್ಲಲೇಬೇಕೆಂದುಕೊಂಡಿರುವ ಡಿಕೆಶಿ, ಈ ಮೂಲಕ ಸಿಪಿ ಯೋಗೀಶ್ವರ್ ಹಾಗೂ ಕುಮಾರಸ್ವಾಮಿಗೂ ತಿರುಗೇಟು ನೀಡಲು ಸಿದ್ಧರಾಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment