Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚನ್ನಪಟ್ಟಣ ಉಪಚುನಾವಣೆ : ಮನೆ, ಮಠ, ಕೋಳಿ, ಮೇಕೆಗಳನ್ನೇ ಅಡವಿಟ್ಟ ಜನ..!

---Advertisement---

ಬೆಟ್ಟಿಂಗ್ ದಂಧೆ ಬರೀ ಕ್ರಿಕೆಟ್ ನಲ್ಲಿ ನಡೆಯುವುದಲ್ಲ, ಚುನಾವಣೆಗಳಲ್ಲೂ ನಡೆಯುತ್ತಿದೆ. ಅದರಲ್ಲೂ ಚನ್ನಪಟ್ಟಣ ಉಪಚುನಾವಣೆಯಲ್ಲಿ ಬೆಟ್ಟಿಂಗ್ ದಂಧೆ ಜೋರಾಗಿದೆ. ಸೋಲು ಗೆಲುವಿನ ಲೆಕ್ಕಚಾರದಲ್ಲಿ ಜನ ಮನೆ ಮಠ, ಕುರಿ, ಕೋಳಿಗಳನ್ನ ಅಡವಿಡುತ್ತಿದ್ದಾರೆ. ಸಿ.ಪಿ.ಯೋಗೀಶ್ವರ್ ಅವರಾ..? ನಿಖಿಲ್ ಕುಮಾರಸ್ವಾಮಿ ಅವರಾ..? ನೋಡಿಯೇ ಬಿಡೋಣಾ ಎನ್ನುತ್ತಿದ್ದಾರೆ.

 

ಈ ಬೆಟ್ಟಿಂಗ್ ದಂಧೆ ಬರೀ ಚನ್ನಪಟ್ಟಣದ ವ್ಯಾಪ್ತಿಯಲ್ಲಷ್ಟೇ ನಡೆಯುತ್ತಿಲ್ಲ, ಬದಲಿಗೆ ಅಕ್ಕಪಕ್ಕದ ಜಿಲ್ಲೆಗಳಿಗೂ ವ್ಯಾಪಿಸಿದೆ. ಬುಕ್ಕಿಂಗ್ ಟ್ರೆಂಡ್ ಪ್ರಕಾರ ಸ್ಥಳೀಯರಿಗೆ ಸಿಪಿ. ಯೋಗೀಶ್ವರ್ ಗೆಲ್ಲುವ ಕಂಟೆಸ್ಟೆಂಟ್ ಆಗಿದ್ರೆ ಹೊರಗಿನವರಿಗೆ ನಿಖಿಲ್ ಕುಮಾರಸ್ವಾಮಿ ಆಗಿದ್ದಾರೆ. ಬೆಟ್ಟಿಂಗ್ ಕಟ್ಟುವವರು ಸಹ ರಾಜಕೀಯ, ಮಾಧ್ಯಮ ಹಾಗೂ ಸಮೀಕ್ಷೆಗಳ ಮೂಲವನ್ನು ಪರೀಕ್ಷಿಸಿ, ಗೆಲುವಿನ ಅದೃಷ್ಟದ ಮೇಲೆ ಕೋಟಿ ಕೋಟಿ ಹೂಡಿಕೆ ಮಾಡುತ್ತಿದ್ದಾರೆ. ಹಣ ಮಾತ್ರವಲ್ಲ ತಮ್ಮ ತಮ್ಮ ಜಮೀನುಗಳನ್ನು ಬರೆದಿಡುತ್ತಿದ್ದಾರೆ.

ಚನ್ನಪಟ್ಟಣದಲ್ಲಿ ನೆಕ್ ಟು ನೆಕ್ ಮೂಮೆಂಟ್ ಸ್ಪರ್ಧೆ ಇತ್ತು. ಯಾರೇ ಗೆದ್ದರು ಕೂದಲೆಳೆ ಅಂತರದಲ್ಲಿ ಗೆಲುವು ಕಾಣಲಿದ್ದಾರೆ. ಸಿಪಿ ಯೋಗೀಶ್ವರ್ ಆರಂಭದಿಂದಾನೂ ಗೆಲುವಿನ ಲೆಕ್ಕಚಾರದಲ್ಲಿಯೇ ಇದ್ದರು. ಗೆದ್ದೇ ಗೆಲ್ಲುತ್ತೇನೆಂಬ ಭರವಸೆಯಲ್ಲಿದ್ದರು. ಆದರೆ ಚುನಾವಣೆ ಮುಗಿದ ಬಳಿಕ ಅದ್ಯಾಕೋ ಬೇಸರದ ಮಾತುಗಳನ್ನಾಡಿದ್ದರು. ಜಮೀರ್ ಆಡಿದ್ದ ಕರಿಯಾ ಎಂಬ ಮಾತೇ ಮುಳ್ಳಾಗಬಹುದು ಎಂಬುದು ಹಲವರ ವಾದವಾಗಿದೆ. ಇದರ ನಡುವೆ ಡಿಕೆ ಸುರೇಶ್ ಅವರು ಸೋಲಿನ ಬಗ್ಗೆ ಆಡಿದ ಮಾತಿಗೆ ಕ್ಲಾರಿಟಿ ನೀಡಿದ್ದರು. ಬೆಟ್ಟಿಂಗ್ ಕಟ್ಟಿ ಜನ ಮನೆ, ಮಠ ಕಳೆದುಕೊಳ್ಳಬಾರದು ಎಂಬ ಕಾರಣಕ್ಕೆ ಯೋಗೀಶ್ವರ್ ಸೋಲಿನ ಮಾತುಗಳನ್ನಾಡಿದ್ದರು ಅಷ್ಟೇ ಎಂದಿದ್ದರು. ಇಡೀ ರಾಜ್ಯದ ಜನರೇ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶಕ್ಕಾಗಿ ಕಾಯ್ತಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...