Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಮೋಸ : ಅರ್ಜುನ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 10 : ಕ್ಷುಲ್ಲಕ ಕಾರಣವನ್ನು ಮುಂದಿಟ್ಟುಕೊಂಡು ಮತಗಳನ್ನು ತಿರಸ್ಕಾರ ಹಾಗೂ ತಡೆಹಿಡಿರುವುದನ್ನು ಮರು ಎಣಿಕೆ ಮಾಡುವಂತೆ ಚಿತ್ರದುರ್ಗ ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅರ್ಜುನ್ ಟಿ.ಕೆ.ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಫೋಟೋ ಮಿಸ್ ಮ್ಯಾಚ್, ವೀಡಿಯೋದಲ್ಲಿ ಲೋಪವಿದೆ ಎನ್ನುವ ನಾನಾ ಕಾರಣಗಳನ್ನು ಕೊಟ್ಟು ನಿಜವಾದ ಮತದಾರರನ್ನು ತಿರಸ್ಕರಿಸಲಾಗಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಆರರಿಂದ ಏಳು ಸಾವಿರ ಮತದಾರರನ್ನು ನೊಂದಾಯಿಸಿದ್ದೇನೆ. ಆದರೆ ನನಗೆ ಬಂದಿರುವುದು 3800 ಮತಗಳು ಮಾತ್ರ. ಉಳಿದ ಮತಗಳು ಎಲ್ಲಿ ಹೋದವು? ಹಾಗಾಗಿ ಪೋಲಿಂಗ್ ಬೂತ್‍ಗೆ ಬಂದು ಮತದಾನ ಮಾಡುವ ಪದ್ದತಿಯಾಗಬೇಕು.

ಚಿಕ್ಕ ಚಿಕ್ಕ ಕಾರಣಗಳಿಗಾಗಿ ಮತಗಳನ್ನು ಹೋಲ್ಡ್ ಮಾಡಿ ತಿರಸ್ಕರಿಸಿರುವುದರಿಂದ ಮರು ಎಣಿಕೆಗೆ ಅರ್ಜಿನ್ ಟಿ.ಕೆ. ಆಗ್ರಹಿಸಿದರು.

ಯೂತ್ ಕಾಂಗ್ರೆಸ್‍ನಲ್ಲಿ ಪಕ್ಷದ ತತ್ವ ಸಿದ್ದಾಂತಗಳನ್ನಿಟ್ಟುಕೊಂಡು ಬೇರು ಮಟ್ಟದಿಂದ ಸಂಘಟಿಸಿರುವ ನನಗೆ ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲುವು ಸಿಗಬೇಕಿತ್ತು. ಆದರೆ ಈ ಚುನಾವಣೆಯಲ್ಲಿ ಮೋಸವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಆಪಾದಿಸಿದರು.

ಹಿರಿಯೂರು ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೇಶವ ಜೆ.ಜೆ.ಹಳ್ಳಿ ಮಾತನಾಡಿ ಹಿರಿಯೂರು ಯೂತ್ ಕಾಂಗ್ರೆಸ್ ಚುನಾವಣಾ ಫಲಿತಾಂಶದಲ್ಲಿ ಮೋಸವಾಗಿದೆ. 12200 ಮತಗಳು ಬಂದಿವೆ. 2390 ಮತಗಳು ತಿರಸ್ಕಾರವಾಗಿರುವುದು ಏಕೆ? ಈ ಚುನಾವಣೆಯ ಫಲಿತಾಂಶ ಪಾರದರ್ಶಕವಾಗಿಲ್ಲ. ಮರು ಎಣಿಕೆಯಾಗಬೇಕು. ಅಕ್ರಮ ನಡೆದಿರುವ ಬಗ್ಗೆ ಅನುಮಾನವಿದೆ. ಈ ಸಂಬಂಧ ಪಕ್ಷದ ನಾಯಕರುಗಳ ಗಮನಕ್ಕೆ ತರಲಾಗುವುದೆಂದು ಹೇಳಿದರು. ಕರುಣ, ಅಜೀಜ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...