ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ನವೆಂಬರ್ 21, ಬೆಂಗಳೂರು: ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್ ಕಾರ್ಡ್ ವಾಪಸ್ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಹಾಗೂ ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು.
ಜಯನಗರದ ಅರಸು ಕಾಲೋನಿಯಲ್ಲಿ ರೇಷನ್ ಕಾರ್ಡ್ ರದ್ದುಗೊಂಡ ಕುಟುಂಬದವರನ್ನು ಅವರು ಭೇಟಿ ಮಾಡಿ, ನಂತರ ಮಾತನಾಡಿದ ಅಶೋಕ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ. ಅನ್ನವನ್ನು ಕದ್ದು ಲಕ್ಷಾಂತರ ಜನರಿಗೆ ಅನ್ಯಾಯ ಮಾಡಿದ್ದಾರೆ. ಅರಸು ಕಾಲೋನಿಯಲ್ಲಿ 45 ವರ್ಷದಿಂದ ರೇಷನ್ ಕಾರ್ಡ್ ಹೊಂದಿದ್ದ ವೃದ್ಧೆ, ಈಗ ಅರ್ಹತೆ ಕಳೆದುಕೊಂಡಿದ್ದಾರೆ. ಅಂಕಿ ಅಂಶದ ಪ್ರಕಾರ, 250 ಸರ್ಕಾರಿ ನೌಕರರ ಬಳಿ ರೇಷನ್ ಕಾರ್ಡ್ ಇದ್ದರೂ, 12 ಲಕ್ಷ ಜನರ ಕಾರ್ಡ್ ರದ್ದು ಮಾಡಲು ಸರ್ಕಾರ ಮುಂದಾಗಿದೆ. ಏನೂ ಭಯ ಬೇಡವೆಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಆಹಾರ ಸಚಿವರು ಮತ್ತೆ ಅರ್ಜಿ ಹಾಕಿ ಎಂದು ಹೇಳುತ್ತಾರೆ. ಕಾಂಗ್ರೆಸ್ ನಾಯಕರು ತಪ್ಪು ಮಾಡಿದ ಮೇಲೆ ಜನರು ಯಾಕೆ ಮರಳಿ ಅರ್ಜಿ ಹಾಕಬೇಕು? ಎಂದು ಪ್ರಶ್ನೆ ಮಾಡಿದರು.
ಮರಳಿ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಿದರೆ ಒಂದು ಕಾರ್ಡ್ಗೆ 10-15 ಸಾವಿರ ರೂ. ಲಂಚ ನೀಡಬೇಕಾಗುತ್ತದೆ. ಯಾರೂ ಅರ್ಜಿ ಹಾಕಬಾರದು, ಸರ್ಕಾರವೇ ಮರಳಿ ರೇಷನ್ ಕಾರ್ಡ್ ಕೊಡಬೇಕು. ದೇವಸ್ಥಾನದ ಮುಂದೆ ಹೂ ಮಾರುವವರು, ಸೊಪ್ಪು ಮಾರುವವರ ರೇಷನ್ ಕಾರ್ಡ್ ರದ್ದುಪಡಿಸಲಾಗಿದೆ. ಇದರ ವಿರುದ್ಧ ಸದನದಲ್ಲಿ ಹಾಗೂ ಹೊರಗೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.
ಏಕಾಏಕಿ ರೇಷನ್ ಕಾರ್ಡ್ ರದ್ದು ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣ ಖಾಲಿಯಾಗಿದ್ದು, ರಸ್ತೆ ಗುಂಡಿ ಮುಚ್ಚಲು ಕೂಡ ಹಣವಿಲ್ಲ. 20-30 ಸಾವಿರ ಕೋಟಿ ರೂ. ಉಳಿಸಿ, ಶಾಸಕರ ಬಂಡಾಯ ಶಮನಕ್ಕೆ ಬಳಸಲಾಗುತ್ತದೆ ಎಂದು ದೂರಿದರು. ಸಚಿವರ ಮನೆ ಆಧುನೀಕರಣಕ್ಕೆ 40-50 ಕೋಟಿ ರೂ., ಸಿಎಂ ಮನೆ ನವೀಕರಣಕ್ಕೆ 2 ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ಬಡ ಜನರಿಗೆ ಅಕ್ಕಿ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್