ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಂಡ್ಯ: ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚ ಆರೋಪಮಾಡಲಾಗಿತ್ತು. ಸಚಿವ ಸ್ಥಾನ ಪಡೆದ ಮೂರೇ ತಿಂಗಳಲ್ಲಿ ಅವರ ಮೇಲೆ ಲಂಚದ ಆರೋಪ ಕೇಳಿ ಬಂದಿತ್ತು. ಆದ್ರೆ ಇದಕ್ಕೆ ಸಚಿವ ಚೆಲುವರಾಯಸ್ವಾಮಿ ಅವರು ತನಿಖೆ ನಡೆಯಲಿ ಅಂತಾನೇ ತಿಳಿಸಿದ್ದರು. ನಾನು ಯಾರ ಬಳಿಯೂ ಲಂಚ ತೆಗೆದುಕೊಂಡಿಲ್ಲ. ಪ್ರಕರಣ ಸಂಬಂಧ ತನಿಖೆಯಾಗಲಿ, ಸತ್ಯಾಸತ್ಯತೆ ತಿಳಿಯುತ್ತೆ ಎಂದಿದ್ದರು.
ಬಳಿಕ ರಾಜ್ಯಪಾಲರಿಗೆ ಬಂದ ಪತ್ರದ ಮೂಲ ಹಿಡಿದು ಹೊರಟ ಸಿಐಡಿ ಅಧಿಕಾರಿಗಳು ಇದೀಗ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಪತ್ರ ಮೈಸೂರಿನ ಪೋಸ್ಟ್ ಆಫೀಸ್ ಒಂದರಲ್ಲಿ ಪೋಸ್ಟ್ ಆಗಿತ್ತು. ಆದರೆ ಅಂದಿನ ಸಿಸಿಟಿವಿಯಲ್ಲಿ ಪತ್ರ ಅಂಟಿಸಿದವರ ಚಹರೆ ಸಿಕ್ಕಿರಲಿಲ್ಲ. ಇದೀಗ ಇಬ್ಬರು ಅಧಿಕಾರಿಗಳು ಸಿಐಡಿ ಅಧಿಕಾರಿಗಳಿಂದ ಲಾಕ್ ಆಗಿದ್ದಾರೆ.
ಕೃಷಿ ಅಧಿಕಾರಿ ಗುರುಪ್ರಸಾದ್, ಇಲಾಖೆ ಅಧಿಕಾರಿ ಸುದರ್ಶನ್ ಎಂಬ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಈ ಇಬ್ಬರು ಚೆಲುವರಾಯಸ್ವಾಮಿ ವಿರುದ್ಧ ಲಂಚದ ಪತ್ರ ಬರೆದು, ರಾಜ್ಯಪಾಲರ ಕಚೇರಿಗೆ ತಲುಪಿಸಿದ್ದರು. ನಕಲಿ ಸಹಿ ಮಾಡಿ ಪತ್ರ ರವಾನೆ ಮಾಡಿದ್ದು ತಿಳಿದು ಬಂದಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್