ಬೆಂಗಳೂರು.ಜುಲೈ.20: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಇಡೀ ರಾಜ್ಯ ಕಂಬನಿ ಮಿಡಿದಿದ್ದು, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಅಧಿಕೃತ ಸೂಚನೆ ನೀಡಿದ್ದು, ಚೆನ್ನಮ್ಮ ಅವರು ಕೇವಲ ಒಂದು ರಾಜಕೀಯ ಕುಟುಂಬದ ಹಿರಿಯರಷ್ಟೇ ಆಗಿರದೆ, ಇಡೀ ರಾಜ್ಯದ ರಾಜಕಾರಣಿಗಳಿಗೆ ಮಾತೃಸ್ವರೂಪಿಯಾಗಿ, ಎಲ್ಲರಿಗೂ ಆದರ್ಶಪ್ರಾಯರಾಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಸೋಮವಾರ ಮಧ್ಯಾಹ್ನದ ನಂತರ ದೇವೇಗೌಡರ ಕುಟುಂಬದ ಕುಲದೇವರಾದ ಮಾವಿನಕೆರೆಯ ಶ್ರೀ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಸಾರ್ವಜನಿಕರು ಹಾಗೂ ಗಣ್ಯರ ಅಂತಿಮ ದರ್ಶನಕ್ಕಾಗಿ ಸೋಮವಾರ ಮುಂಜಾನೆ 7 ಗಂಟೆಯಿಂದ 9.30ರ ವರೆಗೆ ರೇವಣ್ಣ ಅವರ ನಿವಾಸದ ಬಳಿ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಭಾವಪೂರ್ಣ ವಿದಾಯದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ಪ್ರಮುಖ ರಾಜಕೀಯ ಮುಖಂಡರು ಹಾಗೂ ಗಣ್ಯರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಲಿದ್ದಾರೆ.










