Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CHICKEN PRICE : ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿಕನ್ ಬೆಲೆ ; ಕೆಜಿಗೆ ರೂ.720/-…!

Facebook
Twitter
Telegram
WhatsApp

ಇಸ್ಲಾಮಾಬಾದ್ : ನೆರೆಯ ಪಾಕಿಸ್ತಾನದಲ್ಲಿ ಚಿಕನ್ ಬೆಲೆ ಗಗನಕ್ಕೇರಿದೆ. ಕರಾಚಿ ಸೇರಿದಂತೆ ಇತರೆ ನಗರಗಳಲ್ಲಿ ಕೆಜಿ ಕೋಳಿ(ಚಿಕನ್) ಬೆಲೆ 720 ರೂ.ಗೆ ಏರಿಕೆಯಾಗಿದೆ. ಪಾಕಿಸ್ತಾನದ ಇತಿಹಾಸದಲ್ಲಿ ಇಷ್ಟೊಂದು ಬೆಲೆ ಏರಿಕೆಯಾಗಿರುವುದು ಇದೇ ಮೊದಲು ಎಂದು ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಆದರೆ, ಕೋಳಿ ವ್ಯಾಪಾರಗಳು ತಮ್ಮ ವ್ಯಾಪಾರವನ್ನು ನಿಲ್ಲಿಸಿರುವುದು ಕೋಳಿ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ಪಾಕಿಸ್ತಾನದ ಮಾಧ್ಯಮಗಳು ಹೇಳಿವೆ.

ಕೋಳಿಗೆ ಒದಗಿಸುವ ಆಹಾರದ ತೀವ್ರ ಕೊರತೆಯಿಂದಾಗಿ ಕೋಳಿ ವ್ಯಾಪಾರಿಗಳು ತಮ್ಮ ವ್ಯಾಪಾರವನ್ನು ನಿಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಸ್ತುತ ಕರಾಚಿಯಲ್ಲಿ ಒಂದು ಕೆಜಿ ಚಿಕನ್ ಬೆಲೆ 720 ರೂ. ಇಸ್ಲಾಮಾಬಾದ್, ರಾವಲ್ಪಿಂಡಿ ಸೇರಿದಂತೆ ಇತರ ನಗರಗಳಲ್ಲಿ ಈ ಬೆಲೆ 700-710 ರೂಪಾಯಿಗೆ ತಲುಪಿದೆ.

ಪಾಕಿಸ್ತಾನದ ಎರಡನೇ ಅತ್ಯಂತ ಜನಪ್ರಿಯ ನಗರವಾದ ಲಾಹೋರ್‌ನಲ್ಲಿ ಒಂದು ಕೆಜಿ ಚಿಕನ್ ಗೆ ರೂ.550-600 ನಡುವೆ ಮಾರಾಟ ಮಾಡಲಾಗುತ್ತದೆ.

ಇತಿಹಾಸದಲ್ಲೇ ಕಂಡು ಕೇಳರಿಯದ ಈ ಬೆಲೆಯಿಂದ ಚಿಕನ್ ಪ್ರಿಯರು ಕಂಗಾಲಾಗಿದ್ದಾರೆ. ಬೆಲೆ ಹೆಚ್ಚಿರುವುದರಿಂದ ಪ್ರೊಟೀನ್ ಯುಕ್ತ ಚಿಕನ್ ತಿನ್ನಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ತನಿಖೆ :
ಕೋಳಿಗಳಿಗೆ ಆಹಾರದ ಕೊರತೆ ಏಕೆ ಒದಗಿ ಬಂತು ಎಂದು ಸರ್ಕಾರ ತನಿಖೆ ಆರಂಭಿಸಿದೆ.  ಕೋಳಿ ಬೆಲೆ ಇಳಿಸುವ ಮೂಲಕ ಜನರಿಗೆ ಕಡಿಮೆ ಬೆಲೆಗೆ ಚಿಕನ್ ಒದಗಿಸಲು ಪ್ರಯತ್ನಿಸುತ್ತಿದೆ.

ಕೋಳಿ ಉದ್ಯಮವು ಪಾಕಿಸ್ತಾನದ ಆರ್ಥಿಕತೆಯ ಒಂದು ಪ್ರಮುಖ ಭಾಗವಾಗಿದೆ. ಅದರ ಪೂರೈಕೆ ಸರಪಳಿಗೆ ಯಾವುದೇ ಅಡ್ಡಿಯು ದೇಶದ ಆಹಾರ ಭದ್ರತೆ ಮತ್ತು ಆರ್ಥಿಕ ಸ್ಥಿರತೆಯ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ ಎಂದು ಪಾಕಿಸ್ತಾನಿ ಮಾಧ್ಯಮ ಹೇಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಸಜ್ಜು : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಏಪ್ರಿಲ್ 16  : ಏಪ್ರಿಲ್ 26ರಂದು ನಡೆಯಲಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾ ಶಾಖೆಯು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ

ದ್ವಾರಕೀಶ್ ಗಾಡ್ ಫಾದರ್ ಆಗಿದ್ದರು ಚಿತ್ರದುರ್ಗದ ಜಾಫರ್ ಶರೀಫ್ : ಜಾಫರ್ ನಿಧನದ ದಿನ ದ್ವಾರಕೀಶ್ ಏನ್ ಹೇಳಿದ್ರು ಗೊತ್ತಾ..?

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ಇಂದು ದ್ವಾರಕೀಶ್ ಅವರು ಇಲ್ಲ. ಜಾಫರ್ ಶರೀಫ್ ಅವರೂ ಇಲ್ಲ. ಆದರೆ ಅವರಿಬ್ಬರ ಬಾಂಧವ್ಯ ಗಟ್ಟಿಯಾಗಿತ್ತು. ಆತ್ಮೀಯತೆ ಹೆಚ್ಚಾಗಿತ್ತು. ಅಣ್ಣ ತಮ್ಮಂದಿರಂತೆ ಸಂಬಂಧ ಹೊಂದಿದ್ದವರು. ವಯೋಸಹಜ ಕಾಯಿಲೆಯಿಂದ

50 ಸಾವಿರ ಗಡಿದಾಟಿದ ಅಡಿಕೆ ಧಾರಣೆ : ರೈತರ ಮೊಗದಲ್ಲಿ ಸಂತಸ

ದಾವಣಗೆರೆ: ಅಡಿಕೆ ದರ ದಿನೇ ದಿನೇ ಏರಿಕೆ ಇಳಿಕೆಯಾಗುತ್ತಲೆ ಇದೆ. ಕಳೆದ ಕೆಲವು ತಿಂಗಳಿನಿಂದ ಒಂದೇ ರೀತಿಯಿದ್ದ ಅಡಿಕೆ ಬೆಲೆ ಕಂಡು ರೈತರು ನಿರಾಸೆಗೊಂಡಿದ್ದರು. ಆದರೆ ಇದೀಗಕ್ವಿಂಟಾಲ್ ಅಡಿಕೆ ಬೆಲೆ 50 ಸಾವಿರ ಗಡಿ

error: Content is protected !!