ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ರಾಜ್ಯಸಭೆಗೆ ರಾಜೀನಾಮೆ : ಕಾರಣ ಇಲ್ಲಿದೆ..!

ನವದೆಹಲಿ: ತಮಿಳುನಾಡಿನಿಂದ ಮೇಲ್ಮನೆಯ ಹೊಸ ಅವಧಿಗೆ ಆಯ್ಕೆಯಾದ ಬೆನ್ನಲ್ಲೇ ಪಿ ಚಿದಂಬರಂ ಮಹಾರಾಷ್ಟ್ರದ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡು ಹೇಳಿಕೇಳಿ ಚಿದಂಬರಂ ಅವರ ತವರು ರಾಜ್ಯ. ಕಳೆದ ಕೆಲವು ದಿನಗಳ ಹಿಂದೆ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆ ಮಹಾರಾಷ್ಟ್ರ ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಚಿದಂಬರಂ ಅವರು, ತಮಿಳುನಾಡಿನ ರಾಜ್ಯಸಭೆಗೆ ನಾನು ಆಯ್ಕೆಯಾಗಿದ್ದು, ಇದೀಗ ಮಹಾರಾಷ್ಟ್ರದಿಂದ ಆಯ್ಕೆಯಾಗಿದ್ದ ನನ್ನ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯಸಭಾ ಗೌರವಾನ್ವಿತ ಅಧ್ಯಕ್ಷರು ನನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮಹಾರಾಷ್ಟ್ರದ ಜನ ಶಾಂತಿ ಮತ್ತು ಸಮೃದ್ಧಿಯನ್ನು ಹೊಂದಲಿ. ಮಹಾರಾಷ್ಟ್ರ ರಾಜ್ಯವನ್ನು ಪ್ರತಿನಿಧಿಸಿದ್ದು ನನ್ನ ಅದೃಷ್ಟ ಎಂದು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *