ಸುದ್ದಿಒನ್, ಚಿತ್ರದುರ್ಗ, ಜು. 25 :- ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕಿಂದು ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ ಇನ್ನಿತರೆ ಸಚಿವರುಗಳು, ಸಂಸದರು, ಶಾಸಕರು, ಸರ್ಕಾರದ ಮುಖ್ಯಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳು ಭೇಟಿ ನೀಡಿ, ಕರ್ತೃಗದ್ದುಗೆಯ ದರ್ಶನ ಪಡೆದು ಶ್ರೀಮಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ, ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಶ್ರೀ ಬಸವಪ್ರಭು ಸ್ವಾಮಿಗಳು, ಎಸ್.ಎನ್. ಚಂದ್ರಶೇಖರ್ ಅವರಿಂದ ಶ್ರೀಮಠದ ಗೌರವವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಮಾಜಗಳ ಮಠಾಧೀಶರು, ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಎನ್. ತಿಪ್ಪೇಸ್ವಾಮಿ, ಮಹಡಿ ಶಿವಮೂರ್ತಿ ಮೊದಲಾದರಿದ್ದರು.










