Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲುಗಳಿಗೆ ಸೋಲುಣಿಸಿ ಸಮರ್ಥವಾಗಿ ಬಜೆಟ್ ಮಂಡನೆ : ಮಾಜಿ ಸಚಿವ ಎಚ್.ಆಂಜನೇಯ

---Advertisement---

 

ಚಿತ್ರದುರ್ಗ (ಜು.07) : ಈ ಬಾರಿಯ ಬಜೆಟ್ ಮಂಡನೆ ಕುರಿತು ಆರ್ಥಿಕ ಚಿಂತಕರು, ಪ್ರತಿಪಕ್ಷಗಳು, ಜನರಷ್ಟೇ ಅಲ್ಲ ಕಾಂಗ್ರೆಸ್ ಪಕ್ಷದವರಲ್ಲೂ ತೀವ್ರ ಕುತೂಹಲ ಇತ್ತು. ಅಭಿವೃದ್ಧಿ ಕಾರ್ಯಗಳಿಗೆ ಕತ್ತರಿ ಹಾಕದೆ ಬೃಹತ್ ಐವತ್ತು ಸಾವಿರ ಕೋಟಿ ರೂ. ವೆಚ್ಚದ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಹಣ ಹೇಗೆ ಹೊಂದಿಸುತ್ತಾರೆ ಎಂಬ ಪ್ರಶ್ನೇ ಸಾಮಾನ್ಯವಾಗಿ ಉದ್ಭವವಾಗಿತ್ತು.

ಆದರೆ, ಆರ್ಥಿಕ ತಜ್ಞರ ಚಿಂತನೆಗೂ ನಿಲುಕದೆ ಸಾಲು – ಸಾಲು ಸವಾಲುಗಳನ್ನು ಮೆಟ್ಟಿನಿಂತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥವಾಗಿ ಬಜೆಟ್ ಮಂಡಿಸಿದ್ದಾರೆ. ಇದೊಂದು ಪವಾಡ ಎನ್ನಬಹುದು.

ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್ ಕಾಲೇಜ್ ಆರಂಭಕ್ಕೆ ಕ್ರಮ ಹಾಗೂ ಯಾವೊಂದು ಸಮುದಾಯಗಳಿಗೂ ಸಣ್ಣ ಅನ್ಯಾಯ ಆಗದಂತೆ ಅನುದಾನ ಹಂಚಿಕೆ ಮಾಡಲಾಗಿದೆ. ಯಾವ ಅಭಿವೃದ್ಧಿ ಕಾರ್ಯಗಳಿಗೆ ಧಕ್ಕೆ ತರದೆ ಗ್ಯಾರಂಟಿ ಯೋಜನೆ ಜಾರಿ ಜೊತೆಗೆ ಹತ್ತಾರು ಹೊಸ ಯೋಜನೆಗಳಿಗೆ ಅನುದಾನ ಒದಗಿಸಿರುವುದು, ಜತೆಗೆ ಆದಾಯ ಕ್ರೋಢೀಕರಣ ಮಾಡಿರುವುದು ಸಿದ್ದರಾಮಯ್ಯ ಅವರ ವಿತ್ತ ಜ್ಞಾನಕ್ಕೆ ಸಾಕ್ಷಿಯಾಗಿದೆ. ವಿಪಕ್ಷಗಳು ಕೂಡ ಟೀಕೆ ಮಾಡಲು ಸಾಧ್ಯವಾಗದ ರೀತಿ ಬಜೆಟ್ ಮಂಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment