Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಅಡಿಯಲ್ಲಿ ಬದ್ದತೆ ಮೆರೆಯಬೇಕಿದೆ : ಮಾದಾರ ಚೆನ್ನಯ್ಯ ಶ್ರೀ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 13  : ಒಳ ಮೀಸಲಾತಿ ಹೋರಾಟಕ್ಕೆ ಮೂರು ದಶಕಗಳ ಹೋರಾಟದ ಹಿನ್ನೆಲೆ ಇದೆ ಮಾದಾರ ಚೆನ್ನಯ್ಯ ಗುರೂಜಿ ತಿಳಿಸಿದರು.

ನಗರದ ಮಾದಾರ ಚೆನ್ನಯ್ಯ ಗುರುಪೀಠದದಲ್ಲಿ ಒಳ ಮೀಸಲಾತಿ ವಿಚಾರಕ್ಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಮಾದಿಗ ಸಮಾಜದ ಒಳ ಮೀಸಲಾತಿ ಹೋರಾಟಕ್ಕೆ 3 ದಶಕದ ಹೋರಾಟದ ಹಿನ್ನೆಲೆ ಇದ್ದು, ಜನಾಂದೋಲನ ಹೋರಾಟ, ಆಡಳಿತಾತ್ಮಕ ಸಂಘರ್ಷ, ಕಾನೂನಾತ್ಮಕ ಹೋರಾಟ ಮಾಡಿದ್ದೇವೆ. ಮಾದಾರ ಚೆನ್ನಯ್ಯ ಗುರುಪೀಠ ಎಲ್ಲಾ ಹೋರಾಟದಲ್ಲೂ ಜೊತೆಗೆ ಕಾರ್ಯ ನಿರ್ವಹಿಸಿದೆ.
ನಮ್ಮ ಸಮಾಜದ ಹಲವು ನಾಯಕರು ಹೋರಾಟದಲ್ಲಿ ಭಾಗಿಯಾಗಿದ್ದರು ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ನಿರ್ಣಯ ಕೈಕೊಳ್ಳಲು ರಾಜ್ಯ ಸರ್ಕಾರಕ್ಕೆ ತೀರ್ಪು ನೀಡಿದೆ. ಒಳ ಮೀಸಲಾತಿ ರಾಜ್ಯ ಸರ್ಕಾರಗಳೇ ಜಾರಿ ಮಾಡಬೇಕು ಎಂದಿದೆ. ಪರಿಶಿಷ್ಟ ವರ್ಗಗಳ ಒಳ ಮೀಸಲಾತಿಯೂ ಕೂಡಾ ಈ ತೀರ್ಪು ಇದೆ ಎಂದರು.

 

ಕೆನೆ ಪದರದ ವಿಷಯ ಸುಪ್ರೀಂ ಕೋರ್ಟಿನಲ್ಲಿ ಅಭಿಪ್ರಾಯ ಅಷ್ಟೇ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಾ ಕೆನೆಪದರ ಎಂಬ ಪದ ಬಳಕೆ ಮಾಡಿದ್ದಾರೆ. ಕೇಂದ್ರ ಸರ್ಕಾರವೇ ಜಾರಿ ಮಾಡಬೇಕು ಎಂದಿದ್ದಾರೆ. ಕೆನೆಪದರ ನಮ್ಮ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೇಂದ್ರದ ಕ್ಯಾಬಿನೆಟ್ ನಲ್ಲಿ ತೀರ್ಮಾನ ಆಗಿದೆ.ಖರ್ಗೆ ಅವರು ಸುಪ್ರೀಂ ಕೋರ್ಟ್ ತೀರ್ಪು ಇಲ್ಲಿವರೆಗೂ ಸ್ವಾಗತಿಸಿಲ್ಲ. ಯಾವುದೇ ಗೊಂದಲ ಮಾಡದೇ 101 ಸಮುದಾಯಗಳ ಅನುಕೂಲ ಆಗಬೇಕು. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಸುಪ್ರೀಂ ಕೋರ್ಟ್ ತೀರ್ಪಿಗೆ ಬೆಂಬಲ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಅಡಿಯಲ್ಲಿ ಬದ್ದತೆ ಮೆರೆಯಬೇಕಿದೆ. ಸಿಎಂ ಸಿದ್ದರಾಮಯ್ಯ ಅವರು ಸಂಪುಟದ ಸಚಿವರ ಜೊತೆ ಚರ್ಚಿಸಿ ಬೇಗ ಒಳ ಮೀಸಲಾತಿ ಜಾರಿ ಮಾಡಬೇಕು. ಲೋಕ ಸೇವಾ ಆಯೋಗ ಸೇರಿ ಹಲವು ನೇಮಕಾತಿ ತಡೆ ಹಿಡಿಯಬೇಕು ಎಂಬ ಒತ್ತಾಯವಿದೆ. ಸಿಎಂ ಸಿದ್ದರಾಮಯ್ಯ ಅವರನ್ನ ಮುಂದಿನ ದಿನಗಳಲ್ಲಿ ಭೇಟಿ ಮಾಡುತ್ತೇವೆ ಎಂದು ಶ್ರೀಗಳು ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment