Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತರ ಹಣವನ್ನು ದೋಚುತ್ತಿದ್ದಾರೆ : ರಾಜಗೋಪಾಲ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 10 : ದಲಿತರ ಉದ್ದಾರಕ್ಕಾಗಿ ಮೀಸಲಿಡಬೇಕಾಗಿರುವ ಎಸ್ಸಿಪಿ. ಟಿ.ಎಸ್ಪಿ. ಹಣವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ಉಚಿತ ಗ್ಯಾರೆಂಟಿಗಳಿಗೆ ಬಳಸುತ್ತ ದಲಿತರನ್ನು ಯಾಮಾರಿಸುವ ಕೆಲಸ ಮಾಡುತ್ತಿದ್ದಾರೆಂದು ಭಾರತ್ ಏಕತಾ ಮಿಷನ್ ಭೀಮ್ ಆರ್ಮಿ ರಾಜ್ಯಾಧ್ಯಕ್ಷ ರಾಜಗೋಪಾಲ್ ಆಪಾದಿಸಿದರು.

 

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2023-24 ನೇ ಸಾಲಿನಲ್ಲಿ ಹನ್ನೊಂದು ಸಾವಿರದ ನೂರ 44 ಕೋಟಿ ರೂ. 2024-25 ನೇ ಸಾಲಿನಲ್ಲಿ 14282.68 ಕೋಟಿ ರೂ. ಬೇರೆ ಉದ್ದೇಶಗಳಿಗೆ ಖರ್ಚು ಮಾಡಿದ್ದು, 2025-26 ನೇ ಸಾಲಿಗೆ ಎಸ್ಸಿ.ಪಿ. ಟಿ.ಎಸ್ಪಿ. ಹಣವನ್ನು ಐದು ಉಚಿತ ಗ್ಯಾರೆಂಟಿಗಳಿಗೆ ಬಳಸುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಅನ್ಯ ಮಾರ್ಗದಲ್ಲಿ ದಲಿತರ ಹಣ ದೋಚುತ್ತಿರುವುದನ್ನು ನಿಲ್ಲಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆಂದು ಎಚ್ಚರಿಸಿದರು.

 

ಎರಡು ವರ್ಷಗಳಿಂದ ರಾಜ್ಯ ಸರ್ಕಾರ ಒಂದು ಕೊಳವೆಬಾವಿಯನ್ನು ಕೊರೆಸಿಲ್ಲ. ಕಾರ್ ಲೋನ್ ಕೂಡ ಕೊಡುತ್ತಿಲ್ಲ. ಕಾಲಂ ಸಿ. ಮೂಲಕ ದಲಿತರ ಹಣವನ್ನು ಬಳಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ಗ್ಯಾರೆಂಟಿಗಳಿಗೆ ಹಣ ಬಳಸುವುದನ್ನು ಕೂಡಲೆ ನಿಲ್ಲಸಬೇಕೆಂದು ಒತ್ತಾಯಿಸಿದರು.

 

ದಲಿತ ಸೇನೆ ರಾಮವಿಲಾಸ್ ರಾಜ್ಯಾಧ್ಯಕ್ಷ ಎಂ.ಎಸ್.ಜಗನ್ನಾಥ್ ಮಾತನಾಡಿ ದಲಿತರ ಏಳಿಗೆಗಾಗಿ ಖರ್ಚು ಮಾಡಬೇಕಾಗಿರುವ ಎಸ್ಸಿಪಿ. ಟಿ.ಎಸ್ಪಿ. ಹಣವನ್ನು ರಾಜ್ಯ ಸರ್ಕಾರ ಐದು ಉಚಿತ ಗ್ಯಾರೆಂಟಿಗಳಿಗೆ ಬಳಸಿಕೊಳ್ಳುವ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸೆಕ್ಷನ್ 70 ಅಳವಡಿಸಿಕೊಂಡು ದಲಿತರ ಹಣ ದೋಚುತ್ತಿದೆ. ಮೂರು ತಿಂಗಳ ಹಿಂದೆ ಸೆಕ್ಷನ್ 70 ರದ್ದುಪಡಿಸಿರುವ ರಾಜ್ಯ ಸರ್ಕಾರ ದಲಿತರ ಹಣಕ್ಕೆ ಕೈಹಾಕಿದೆ. ದಲಿತ ಕೇರಿಗಳಿಗೆ ಹಣ ಸಮರ್ಪಕವಾಗಿ ಬಳಕೆಯಾದರೆ ನಮಗೆ ಮೀಸಲಾತಿ ಬೇಕಿಲ್ಲ. ದಲಿತರ ಪರವಾಗಿದ್ದೇವೆಂದು ಹೇಳಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಬೀತುಪಡಿಸಲಿ. ನಾಲ್ಕೈದು ಜಿಲ್ಲೆಗಳಲ್ಲಿ ನಮ್ಮ ಹೋರಾಟ ಸಮಿತಿಯಿದೆ. ಈಗಾಗಲೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಮಾಡಿದ್ದೇವೆ. ಮುಂದೆಯೂ ಹೋರಾಟ ಮಾಡುತ್ತೇವೆಂದರು.

 

ಭಾರತ್ ಏಕತಾ ಮಿಷನ್ ರಾಜ್ಯ ಉಪಾಧ್ಯಕ್ಷ ಅವಿನಾಶ್, ದಲಿತ ಸೇನೆ ತುಮಕೂರು ಜಿಲ್ಲಾಧ್ಯಕ್ಷ ಸಿದ್ದರಾಜು ಗೋಳೂರು, ಕುಮಾರ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...