Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ಬೆಂಗಳೂರು,ಅ.16 :BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.

ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು,ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment