ದಾವಣಗೆರೆ ಡಿಸೆಂಬರ್ 24 : ಮಾನ್ಯ ಮುಖ್ಯ ಮಂತ್ರಿಯವರಾದ ಸಿದ್ದರಾಮಯ್ಯ ಅವರು ಡಿಸೆಂಬರ್-2025ರ ಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಡಿ.26 ರಂದು ಮಧ್ಯಾಹ್ನ 12.15 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆ ಎಂ.ಬಿ.ಎ. ಮೈದಾನಕ್ಕೆ ಅಗಮಿಸುವರು. ನಂತರ ಶ್ರೀಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ನಡೆಯುವ ಮಾಜಿ ಸಚಿವರು ಹಾಗೂ ಶಾಸಕರಾದ ಲಿಂ||ಶಾಮನೂರು ಶಿವಶಂಕರಪ್ಪ ನವರ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೆಲಿಕ್ಯಾಪ್ಟರ್ ಮೂಲಕ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು.





