Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ : ಕಾರ್ಯಕ್ರಮಗಳ ವಿವರ ಇಲ್ಲಿದೆ…!

---Advertisement---

ಚಿತ್ರದುರ್ಗ ಅ. 05 : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅಕ್ಟೋಬರ್ 06 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗದ ಮುರುಘಾಮಠ ಆವರಣದಲ್ಲಿನ ಹೆಲಿಪ್ಯಾಡ್‍ಗೆ ಆಗಮಿಸುವರು.

ನಂತರ ಇಲ್ಲಿನ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಬೆ. 11.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹಿರಿಯೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್‍ಗೆ ಆಗಮಿಸುವರು.

ಮಧ್ಯಾಹ್ನ 12.10 ಗಂಟೆಗೆ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ಗೆ ತೆರಳಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ವತಿಯಿಂದ ಆಯೋಜಿಸಿರುವ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2.40 ಗಂಟೆಗೆ ಹಿರಿಯೂರಿಗೆ ತೆರಳಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಆಯೋಜಿಸಿರುವ “ಕನಕ ಸಮುದಾಯ ಭವನ” ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸುವರು.

ಮಧ್ಯಾಹ್ನ 3.10 ಗಂಟೆಗೆ ಹಿರಿಯೂರಿನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment