ಚಿತ್ರದುರ್ಗ. ಜುಲೈ.26: ಹಣಕಾಸು ವ್ಯವಹಾರದಲ್ಲಿ ಹಣ ದುರುಪಯೋಗ ಪಡಿಸಿಕೊಂಡ ಆರೋಪದಲ್ಲಿ ಚಿಕ್ಕಗೊಂಡನಹಳ್ಳಿ ಪಿ.ಡಿ.ಓ ಎನ್.ಪಾಲಯ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ನನ್ನಿವಾಳ ಗ್ರಾ.ಪಂ. ಪಿಡಿಓ ಆಗಿ ಕರ್ತವ್ಯ ನಿರ್ವಹಿಸುವ ವೇಳೆ ಎನ್.ಪಾಲಯ್ಯ ಅವರು ಗ್ರಾ.ಪಂ. ಸಿಬ್ಬಂದಿ ವೇತನ, 14 ಮತ್ತು 15ನೇ ಹಣಕಾಸು ಯೋಜನೆ ಅನುದಾನ, ಲೇ ಔಟ್ಗಳ ತೆರಿಗೆ ಹಾಗೂ ಶುಲ್ಕ ಸಂಗ್ರಹದ ವ್ಯವಹಾರದಲ್ಲಿ ಹಣಕಾಸಿನ ದುರಪಯೋಗ ತೋರಿದ್ದಾರೆ, ಇದರ ಜೊತೆಗೆ ಕಿವುಡ ಹಾಗೂ ಮೂಗರ ನಿವೇಶನಗಳ ಹಂಚಿಕೆ, ವೈಯಕ್ತಿಕ ಲಾಭಕ್ಕಾಗಿ ಆಯಿಲ್ ಮಿಲ್, ಜಲ್ಲಿ ಕ್ರಷರ್ಗಳಿಗೆ ಕಡಿಮೆ ತೆರಿಗೆ ವಿಧಿಸಿ ಗ್ರಾ.ಪಂ.ಗೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪಕ್ಕೆ ಗುರಿಯಾಗಿದ್ದರು. ಆರೋಪಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ನೀಡಿದ ನೋಟಿಸ್ಗೂ ಸರಿಯಾದ ಉತ್ತರ ನೀಡದೆ ಕರ್ತವ್ಯ ಲೋಪ ಎಸಗಿದ್ದಾರೆ. ಈ ಹಿನ್ನಲೆಯಲ್ಲಿ ಚಳ್ಳಕೆರೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯಿಂದ ವರದಿ ಪಡೆದು, ನಿಯಮಾನುಸಾರ ಎನ್. ಪಾಲಯ್ಯ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸಿಇಓ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











