ಚಿಕ್ಕಬಳ್ಳಾಪುರದಲ್ಲಿ ಮಂಗಳಮುಖಿ ಸಾವು ಪ್ರಕರಣಕ್ಕೆ ಸಿಕ್ತು ಬಿಗ್ ಟ್ವಿಸ್ಟ್..!

suddionenews
1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯ ದೇವಸ್ಥಾನದ ಮಂಗಳ ಮುಖಿ ಪೂಜಾರಿ ನವೆಂಬರ್ 12ರಂದು ಕೊಠಡಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೇವಾಲಯದ ಕೊಠಡಿಯೊಂದರಲ್ಲಿ ಪೂಜಾರಿ ಶ್ರೀಧರ್ ಹಾಗೂ ಸಹಾಯಕ ಲಕ್ಷ್ಮೀಪತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಚಿಂತಾಮಣಿ ನಗರ ಪೊಲೀಸರು ತನಿಖೆ ಕೈಗೊಂಡಿದ್ದರು.

ಇದೀಗ ಆ ಪ್ರಕರಣ ಸಂಬಂಧಿಸಿದಂತೆ ಮೃತರ ಮೊಬೈಲ್ ನಲ್ಲಿ ಸೆರೆಯಾಗಿದ್ದ ವಿಡಿಯೋ ಸಿಕ್ಕಿದೆ. ಸಾವಿಗೂ ಮುನ್ನ ಇಬ್ಬರೂ ವಿಡಿಯೋದಲ್ಲಿ, ಸಾವಿಗೆ ತಾವೇ ಕಾರಣ, ಯಾರೂ ಕಾರಣರಲ್ಲ. ಜೀವನದಲ್ಲಿ ಜಿಗುಪ್ಸೆಯಾಗಿ ಸಾವನ್ನಪ್ಪುತ್ತಿದ್ದೇವೆ. ದೇವಾಲಯದ ಭಕ್ತರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಹೇಳಿಕೊಂಡಿದ್ದಾರೆ.

ತನಿಖೆ ಕೈಗೊಂಡಿದ್ದ ಪೊಲೀಸರಿಗೂ ಇದು ಆತ್ಮಹತ್ಯೆಯೋ ಕೊಲೆಯೋ ಎಂಬ ಅನುಮಾನ ಇತ್ತು.‌ ಇದೀಗ ವಿಡಿಯೋ ಸಿಕ್ಕಿದ್ರು ಕೂಡ ಆ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕಿಲ್ಲ. ವಿಡಿಯೋದಲ್ಲಿ ಸಾವಿನ ಬಗ್ಗೆ ಏನನ್ನು ಮಾಹಿತಿ ನೀಡಿಲ್ಲ. ಪೊಲೀಸರು ಇನ್ನು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *