Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರೀ ಮಳೆಗೆ ತುಂಬಿ ಹರಿಯುತ್ತಿದೆ ರಸ್ತೆಗಳು : ಚಿಕ್ಕಬಳ್ಳಾಪುರದ ಸ್ಥಿತಿ ಹೇಗಿದೆ ಗೊತ್ತಾ..?

Facebook
Twitter
Telegram
WhatsApp

 

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕಳೆದ ಹದಿನೈದು ದಿನದಿಂದ ಸುರಿಯುತ್ತಿರುವ ಮಳೆ ಜನರನ್ನ ಹೈರಾಣಾಗಿಸಿದೆ. ಭಾರೀ ಮಳೆಯಿಂದಾಗಿ ರಸ್ತೆಗಳ ತುಂಬೆಲ್ಲಾ ನೀರು ನಿಂತಿದೆ.

ರಸ್ತೆ ಮೇಲೆಲ್ಲಾ ನೀರು ತುಂಬಿರೋದಕ್ಕೆ ವಾಹನ ಸವಾರರು ಸುಸ್ತಾಗಿದ್ದಾರೆ. ಯುವಕನೊಬ್ಬ ನೀರು ತುಂಬಿದ ರಸ್ತೆಯಲ್ಲಿ ಬೈಕ್ ಸವಾರಿ ಮಾಡಲು ಹೋಗಿ ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುತ್ತಿದ್ದ. ಆದರೆ ಅದೃಷ್ಟವಶಾತ್ ಆತನನ್ನ ಸ್ಥಳೀಯರು ಕಾಪಾಡಿದ್ದಾರೆ.

ಮಳೆಗೆ ರಸ್ತೆಯೆಲ್ಲಾ ತುಂಬಿ ಹರಿಯುತ್ತಿದೆ. ಗುಡಿ ಬಂಡೆಯ ಅಮಾನಿ ಬೈರಸಾಗರ ಕೆರೆ ಕೋಡಿ ಬಿದ್ದಿದೆ. ಹೀಗಾಗಿ ಗುಡಿಬಂಡೆ ಹಾಗೂ ಚಿಕ್ಕಬಳ್ಳಾಪುರ ರಸ್ತೆ ಸಂಪರ್ಕ ಸಾಧ್ಯವಾಗಿಲ್ಲ. ಕೋಡಿ ಬಿದ್ದು ನೀರು ಹರಿಯುತ್ತಿರುವ ಪರಿಣಾಮ ಅಪಾಯದ ಮುನ್ಸೂಚನೆಯಿದ್ದು, ರಸ್ತೆ ದಾಟಲು ಸಾಧ್ಯವಾಗ್ತಿಲ್ಲ. ನಾಲ್ಕು ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ.

ನೀರಿನ ನಡುವೆ ರಸ್ತೆ ದಾಟುವ ಪ್ರಯತ್ನ ಮಾಡಬೇಡಿ ಎಂದು ಈಗಾಗಲೇ ಸ್ಥಳೀಯರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಆದ್ರೂ ಯುವಕನೋರ್ವ ಬೈಕ್ ನಲ್ಲಿ ರಸ್ತೆ ದಾಟಲು ಹೋಗಿದ್ದಾನೆ. ಇದರ ಪರಿಣಾಮ ಹರಿಯುತ್ತಿರುವ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ. ತಕ್ಷಣ ಎಚ್ಚೆತ್ತ ಸ್ಥಳೀಯರು ಟ್ರ್ಯಾಕ್ಟರ್ ನಲ್ಲಿ ಬಂದು ಆ ಯುವಕನನ್ನು ರಕ್ಷಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

error: Content is protected !!