ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಹೊಳಲ್ಕೆರೆ, ನವಂಬರ್. 03 : ತಾಲ್ಲೂಕಿನ ಗುಂಜಿಗನೂರು ಗ್ರಾಮದ ಹೊನ್ನಪ್ಪರ ದಿನೇಶ್ ರವರ ಮನೆಯ ಮುಂಬಾಗದ ರಸ್ತೆಯಲ್ಲಿ ಇಸ್ಪೇಟ್ ಜೂಜಾಟ ನಿರತರ ಮೇಲೆ ಚಿಕ್ಕಜಾಜೂರು ಠಾಣೆಯ ಪಿ.ಎಸ್.ಐ ನೇತ್ರಾವತಿ ನೇತೃತ್ವದಲ್ಲಿ ಕಾನೂನುಬಾಹಿರವಾದ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ದಾಳಿ ಮಾಡಿ 9 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಜೂಜಾಟ ನಿರತರಿಂದ 16410/- ರೂ.ವಶಕ್ಕೆ ತೆಗೆದುಕೊಳ್ಳಲಾಗಿದೆ.
ಭಾನುವಾರ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ಈ ಪ್ರಕರಣದಲ್ಲಿ,
ಹೊಳಲ್ಕೆರೆ ತಾಲ್ಲೂಕು ಗುಂಜಿಗನೂರು ಗ್ರಾಮದ
1] ವೆಂಕಟೇಶ
2]ತಿಪ್ಪೇಸ್ವಾಮಿ
3]ಶಶಿಕುಮಾರ
4] ಸಂತೋಷಕುಮಾರ
5] ರವಿಕುಮಾರ
6]ತಿಮೇಶ
7]ನಾಗರಾಜ
8]ಮಂಜುನಾಥ
9] ನಾಗರಾಜ ಎಂಬ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ದೂರು ದಾಖಲಿಸಲಾಗಿದೆ.
ಚಿಕ್ಕಜಾಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಈ
ಕಾರ್ಯಚರಣೆಯಲ್ಲಿ ಪಾಲ್ಗೊಂಡ ಠಾಣೆಯ ಪಿ.ಎಸ್.ಐ ನೇತ್ರಾವತಿ, ಸಿಬ್ಬಂದಿಯರಾದ ಮಲ್ಲೇಶ್, ತಿಪ್ಪೇಶ್, ಜಹೀರ್, ಮಂಜುನಾಥ್, ಮನೋಹರ್ ರವರನ್ನು ಪೊಲೀಸ್ ಅಧೀಕ್ಷಕರವರು ಶ್ಲಾಘನೆಯನ್ನು ವ್ಯಕ್ತಪಡಿಸಿರುತ್ತಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್