ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 06 : ಚಿತ್ರದುರ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಜಿಲ್ಲಾ ಆಸ್ಪತ್ರೆಯ ಹಿರಿಯ ಪ್ರಸೂತಿ ತಜ್ಞ ಡಾ.ಶಿವಕುಮಾರ್.ಕೆ. ಅವರ ಸೇವಾ ನಿರ್ಲಕ್ಷ್ಯತೆಗೆ ರೂ. 55,000/- ಪರಿಹಾರವನ್ನು ದೂರುದಾರರಿಗೆ ನೀಡುವಂತೆ ಆದೇಶಿಸಿದೆ.

ಚಿತ್ರದುರ್ಗದ ಶ್ರೀಮತಿ ಲಕ್ಕಮ್ಮ ಇವರಿಗೆ ಕೈಗೊಂಡ ಸಂತಾನ ಹರಣ ಶಸ್ತ್ರಚಿಕಿತ್ಸೆ ವಿಫಲಗೊಂಡು ಮತ್ತೊಂದು 3ನೇ ಮಗುವಿಗೆ ಗರ್ಭ ಧರಿಸಿದ್ದು, ಇದು ವೈದ್ಯರ ಸೇವಾ ನಿರ್ಲಕ್ಷ್ಯತೆಯಿಂದ ಸಂತಾನ ಹರಣ ಶಸ್ತ್ರಚಿಕಿತ್ಸೆ ವಿಫಲತೆಯಿಂದ ಉಂಟಾಗಿರುವ ಸೇವಾ ನಿರ್ಲಕ್ಷ್ಯತೆ ಎಂದು
ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ತೀರ್ಪು ನೀಡಿದೆ.
ಘಟನೆ ಹಿನ್ನೆಲೆ :
ದೂರುದಾರರಾದ ಲಕ್ಷ್ಮಮ್ಮ ಅವರು ದಿನಾಂಕ:28/04/2014ರಂದು ಡಾ.ಕೆ.ಶಿವಕುಮಾರ್ ಪ್ರಸೂತಿ ತಜ್ಞರು ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ ಮತ್ತು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಮೇಲಾಧಿಕಾರಿಗಳ ಸೇವಾ ನಿರ್ಲಕ್ಷತೆಯಿಂದ 28/04/2014ರಲ್ಲಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಫಲಕಾರಿಯಾಗದೆ ದೂರುದಾರರು ಗರ್ಭಧರಿಸಿ 3ನೇ ಮಗುವಿಗೆ ದಿನಾಂಕ:26/01/2020ರಂದು ಜನ್ಮ ನೀಡಿದ್ದು ಇದು ವೈದ್ಯರ ನಿರ್ಲಕ್ಷ್ಯತೆಯಿಂದ 3ನೇ ಮಗುವಿಗೆ ಕಾರಣವಾಗಿರುತ್ತದೆ.
ದೂರುದಾರರು ಎದುರುದಾರರ ವೈದ್ಯಕೀಯ ಸೇವಾ ನಿರ್ಲಕ್ಷ್ಯಕ್ಕೆ ಪರಿಹಾರ ಕೋರಿ ಚಿತ್ರಮರ್ಗ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ದಿನಾಂಕ:17/02/2021ರಂದು ದೂರನ್ನು ದಾಖಲಿಸಿರುತ್ತಾರೆ. ಆಯೋಗವು ದೂರುದಾರರು ಹಾಜರುಪಡಿಸಿದ ದಾಖಲೆಗಳು ಮತ್ತು , ದಿನಾಂಕ : 28/04/2014 ಹರಣ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗದ ಕಾರಣ ದೂರುದಾರರು 26/01/2020ರಲ್ಲಿ 3ನೇ ಮಗುವಿಗೆ ಜನ್ಮ ನೀಡಿರುತ್ತಾರೆ ಇದು ವೈದ್ಯರ ನಿರ್ಲಕ್ಷ್ಯತೆಗೆ ಕಾರಣ ಎಂದು ಆಯೋಗವು ಅಭಿಪ್ರಾಯಪಟ್ಟು ನೊಂದ ದೂರುದಾರರಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಫಲಕಾರಿಯಾಗದಿರುವುದಕ್ಕೆ ಪರಿಹಾರ ರೂಪವಾಗಿ ರೂ.30,000/- ಮತ್ತು ಮಾನಸಿಕ, ದೈಹಿಕ ಹಿಂಸೆಗೆ ದೂರು ಖರ್ಚು 25,000/- ಗಳನ್ನು ಒಟ್ಟು 55,000/- ಗಳನ್ನು ಪಾವತಿಸಲು ಆದೇಶಿಸಿ ದಂಡವನ್ನು ವಿಧಿಸಿರುತ್ತದೆ. ಈ ಆದೇಶದ ದಿನಾಂಕದಿಂದ 30 ದಿನಗಳಲ್ಲಿ ಮೇಲ್ಕಂಡ ಪರಿಹಾರ ಮೊತ್ತವನ್ನು ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಕುಮಾರಿ ಹೆಚ್.ಎನ್. ಮೀನಾ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಹೆಚ್.ಯಶೋಧರವರು ಆದೇಶ ಹೊರಡಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್