Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಿರುಪತಿ ಬೆಟ್ಟ ಹತ್ತುವಾಗ ಚಿರತೆ ದಾಳಿಗೆ ಮಗು ಸಾವು : ಸಿಸಿಟಿವಿಯಲ್ಲಿ ಸೆರೆ..

Facebook
Twitter
Telegram
WhatsApp

 

ಪ್ರಪಂಚದಲ್ಲಿಯೇ ಅತ್ಯಂತ ಶ್ರೀಮಂತ ದೇವರು ಎಂದರೆ ಅದು ತಿರುಪತಿ‌ ತಿಮ್ಮಪ್ಪ. ದೇಶದ ನಾನಾ ಭಾಗಗಳಿಂದ ತಿರುಪತಿ ತಿಮ್ಮಪ್ಪನಿಗೆ ಭಕ್ತರಿದ್ದಾರೆ. ದೇವಸ್ಥಾನಕ್ಕೆ‌ ಕೆಲವರು ಬೆಟ್ಟದ ಮೇಲಕ್ಕೆ ಗಾಡಿಯಲ್ಲಿ ಹೋದರೆ, ಇನ್ನು ಕೆಲ ಭಕ್ತರು ಬೆಟ್ಟ ಹತ್ತಿಕೊಂಡು ಹೋಗುತ್ತಾರೆ. ಆದ್ರೆ ಹೀಗೆ ಬೆಟ್ಟ ಹತ್ತುವಾಗ ಚಿರತೆಯ‌ ಬಗ್ಗೆ ಕೊಂಚ ಗಮನವಿರಲಿ.

ಪಾದಚಾರಿ‌ ಮಾರ್ಗದಲ್ಲಿ ತೆರಳುವಾಗ ಚಿರತೆಯೊಂದು‌ ಬಾಲಕಿಯನ್ನು ಹೊತ್ತುಕೊಂಡು ಹೋಗಿದೆ. ತನ್ಮ ಮನೆಯವರ ಜೊತೆಗೆ ಲಕ್ಷಿತಾ ಎಂಬ ಆರು ವರ್ಷದ ಪುಟ್ಟ ಬಾಲಕಿ ಕೂಡ ಬೆಟ್ಟ ಹತ್ತುತ್ತಿದ್ದಳು. ಆದ್ರೆ ಈ ವೇಳೆ‌ಮಾರ್ಗ ಮಧ್ಯದಲ್ಲಿಯೇ ಬಾಲಕಿ ನಾಪತ್ತೆಯಾಗಿದ್ದಾಳೆ. ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ಅಲ್ಲಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಸತ್ಯ ಗೊತ್ತಾಗಿದೆ. ಚಿರತೆಯೊಂದು ಮಗುವನ್ನು ಹೊತ್ತುಕೊಂಡ ಹೋದ ದೃಶ್ಯ ಸೆರೆಯಾಗಿದೆ. ಸದ್ಯ ಪೊಲೀಸರು ನಾಪತ್ತೆಯಾದ ಕಾಡಲ್ಲೆಲ್ಲಾ ಹುಡುಕಾಟ ನಡೆಸಿದಾಗ, ಮಗುವಿನ ಮೃತದೇಹ‌ ಸಿಕ್ಕಿದೆ. ಚಿರತೆಯ ದಾಳಿಗೆ ಲಕ್ಷಿತಾಳ ಪ್ರಾಣವೇ ಹೋಗಿದೆ. ತಿರುಪತಿಯಲ್ಲಿಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪಾದಯಾತ್ರೆಯ ಮೂಲಕ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವುದರಿಂದ ಒಳ್ಳೆಯದ್ದಾಗುತ್ತದೆ, ಪುಣ್ಯ ಸಿಗುತ್ತದೆ ಎಂದು ನಂಬಿ, ತಿಮ್ಮಪ್ಪನ ಮೇಲೆ ಭಾರ ಹಾಕಿ ಹೊರಟ ಭಕ್ತರಿಗೆ, ಯಾವತ್ತಿಗೂ ಅರಗಿಸಿಕೊಳ್ಳಲಾಗದ ನೋವು ಸಿಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!