ಚಿತ್ರದುರ್ಗ. ಆಗಸ್ಟ್. 02: ಚಳ್ಳಕೆರೆ ತಾಲ್ಲೂಕಿನ ದಾರ್ಲಹಳ್ಳಿ ಗ್ರಾಮದ ದೇವರಾಜು ಅಪ್ರಾಪ್ತ ಬಾಲಕಿಯನ್ನು, ಬಳ್ಳಾರಿ ಹತ್ತಿರದ ಗವಿಸಿದ್ದೇಶ್ವರ ಮಠದಲ್ಲಿ ವಿವಾಹ ಆದ ಹಿನ್ನಲೆಯಲ್ಲಿ ಅವರ ವಿರುದ್ದ ಎಫ್.ಐ.ಆರ್ ದಾಖಲಿಸಲಾಗಿದೆ.
ಬಾಲ್ಯ ವಿವಾಹ ವಿಷಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗಮನಕ್ಕೆ ಬಂದಿದ್ದರಿಂದ ಪರಿಶೀಲಿಸಿ, ಚಳ್ಳಕೆರೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ವರದಿ ಕಳುಹಿಸಿಕೊಡಲಾಗಿತ್ತು.
ಇದನ್ನು ಆಧರಿಸಿ ಆಗಸ್ಟ್ 01 ರಂದು ಪರುಶುರಾಂಪುರ ಪೊಲೀಸ್ ಠಾಣೆಯಲ್ಲಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಚಳ್ಳಕೆರೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ ಎಂದು ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












