ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಹೊಳಲ್ಕೆರೆ, ನವೆಂಬರ್. 13 : ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದರೂ ಪ್ರಸ್ತುತ ಅನ್ಯಭಾಷಿಕರು ಕರ್ನಾಟಕದಲ್ಲಿ ಖಾಸಗಿ ಶಿಕ್ಷಣ, ವೈದ್ಯಕೀಯ, ತಂತ್ರಜ್ಞಾನ ಮತ್ತು ಔದ್ಯೋಗಿಕ ಕ್ಷೇತ್ರದ ಬಹುಪಾಲು ಉದ್ಯೋಗಗಳನ್ನು ಪಡೆಯುತ್ತಿದ್ದಾರೆ. ಭವಿಷ್ಯದಲ್ಲಿ ನಮ್ಮ ಮಕ್ಕಳಾದ ಶಾಲಾ ವಿದ್ಯಾರ್ಥಿಗಳೇ ಕನ್ನಡ ಭಾಷೆ ಉಳಿಸಿ ಬೆಳೆಸುವ ರಾಯಭಾರಿಗಳಾಗಬೇಕಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರು ಹಾಗು ಹೊಳಲ್ಕೆರೆ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಟಿ.ಪಿ.ಉಮೇಶ್ ಹೇಳಿದರು.
ಹೊಳಲ್ಕೆರೆ ಅಮೃತಾಪುರ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಕಂಪು ಕನ್ನಡ ನುಡಿ ಹಬ್ಬ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ದೇಶ ಹಲವಾರು ಭಾಷೆಗಳ ತವರು. ಕನ್ನಡ ಕರ್ನಾಟಕದ ಪ್ರಾಂತೀಯ ಭಾಷೆ. ಶಾಸ್ತ್ರೀಯ ಸ್ಥಾನಮಾನ ಪಡೆದ ಭಾಷೆ. ಕನ್ನಡ ನಾಡಿಗೆ ಅನ್ಯ ಭಾಷಿಕರ ವಿಪರೀತ ಬರುವಿಕೆಯಿಂದ ಕನ್ನಡಿಗರು ಉದ್ಯೋಗಗಳ ನಷ್ಟದ ಜೊತೆಗೆ ಕನ್ನಡ ಭಾಷೆಯ ಅವನತಿಯ ಮುನ್ಸೂಚನೆ ಕಾಣುವಂತಾಗಿದೆ. ಇಂದು ಕನ್ನಡಿಗರ ಕರ್ನಾಟಕ ಸರ್ಕಾರವೇ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತೆರೆದು ಶಿಕ್ಷಣ ನೀಡುತ್ತಿದೆ. ಶಿಕ್ಷಣದಲ್ಲಿ ಹಾಗು ಆಡಳಿತದಲ್ಲಿ ಕನ್ನಡ ಭಾಷೆ ಬಳಕೆ ಜಾರಿಗೆ ಗೋಕಾಕ ಚಳುವಳಿಗಳು ನಡೆದದ್ದು ಸತ್ಯವೇ ಎಂದು ಇನ್ನು ಕೆಲವೇ ವರ್ಷಗಳಲ್ಲಿ ಸೋಜಿಗ ಪಡುವ ಕಾಲ ಬರುತ್ತದೆ. ಬಾಲ್ಯದಿಂದಲೇ ಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ಹಾಡು ಪದ್ಯ ಕತೆ ಸಾಹಿತಿಗಳ ಕುರಿತು, ಕನ್ನಡ ಭಾಷೆಯ ಪ್ರಾಚೀನತೆ ಕುರಿತು, ಹಬ್ಬ ಜಾತ್ರೆ ಹರಿದಿನಗಳು, ಹಳ್ಳಿಯ ಕಸುಬುಗಳ ಪರಿಚಯ ಮಾಡಿಕೊಡಬೇಕಿದೆ. ಹೆಚ್ಚಾಗಿ ಮಕ್ಕಳ ಸಾಹಿತ್ಯ ಓದು ಬರಹದ ಮೂಲಕ ಕನ್ನಡ ಭಾಷೆಯನ್ನು ಬೆಳೆಸಲು ವಿದ್ಯಾರ್ಥಿಗಳನ್ನು ಸನ್ನದ್ಧಗೊಳಿಸಬೇಕಿದೆ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳಾದ ಮಾನಸ, ಉಷ, ದೀಕ್ಷಾ, ತನುಶ್ರೀ ಕನ್ನಡ ನಾಡು ನುಡಿ ಸಾಗಿ ಬಂದ ದಾರಿಯ ಕುರಿತು ಭಾಷಣ ಮಾಡಿದರು. ದೀಕ್ಷಾ ಮತ್ತು ಸಂಗಡಿಗರು ಕರುನಾಡೆ ಕೈಬೀಸಿದೆ, ಕನ್ನಡ ನಾಡಿನ ಜೀವನದಿ ಹಾಗು ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಡುಗಳಿಗೆ ನೃತ್ಯ ಮಾಡಿದರು. ಅಮೃತಾಪುರ ಶಾಲೆ ಹಾಗು ಮಕ್ಕಳ ಸಾಹಿತ್ಯ ಪರಿಷತ್ತು ವತಿಯಿಂದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಡಿ.ಸಿದ್ಧಪ್ಪ, ಸಹಶಿಕ್ಷಕಿ ಜಿ.ಎನ್.ರೇಷ್ಮಾ ಅಕ್ಷರ ದಾಸೋಹ ಕಾರ್ಯಕರ್ತರಾದ ತಿಮ್ಮಕ್ಕ, ಶಾರದಮ್ಮ ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್