Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಾಶ್ರ್ವನಾಥ ಶಾಲೆಯಲ್ಲಿ ಮಕ್ಕಳಿಂದ ದೀಪಾವಳಿ ಆಚರಣೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಆ. 18 : ನಗರದ ಪಾಶ್ರ್ವನಾಥ ವಿದ್ಯಾಸಂಸ್ಥೆವತಿಯಿಂದ ಶನಿವಾರ ಶಾಲಾ ಆವರಣದಲ್ಲಿ ದೀಪಾವಳಿ ಹಬ್ಬವನ್ನು ಮಕ್ಕಳ ಸಮ್ಮುಖದಲ್ಲಿ ಆಚರಣೆಯನ್ನು ಮಾಡಲಾಯಿತು.

ಈ ಸಮಯದಲ್ಲಿ ಸುಮಾರು 1500 ದೀಪಗಳನ್ನು ಹಚ್ಚುವುದರ ಮೂಲಕ ದೀಪಾವಳಿಯನ್ನು ಆಚರಣೆ ಮಾಡಲಾಯಿತು.

ಶ್ರೀ ಪಾಶ್ರ್ವನಾಥ ವಿದ್ಯಾ ಸಂಸ್ಥೆಯ ಶಾಲಾ ಆಧ್ಯಕ್ಷರಾದ ಬಾಬುಲಾಲ್ ಪೈಯಾದ್ ದೀಪವನ್ನು ಹಚ್ಚುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಈ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿ ಹಬ್ಬವಾಗಿ ಆಚರಣೆಯನ್ನು ಮಾಡಿ, ಹೆಚ್ಚಾಗಿ ಶಬ್ದವನ್ನು ಮಾಡುವಂತ ಹಾಗೂ ಹೆಚ್ಚಾಗಿ ಮಾಲಿನ್ಯವನ್ನು ಉಂಟು ಮಾಡುವಂತ ಪಟಾಕಿಗಳನ್ನು ಹಚ್ಚ ಬೇಡಿ ಇದರಿಂದ ನಮ್ಮ ಪರಿಸರಕ್ಕೆ ಹಾನಿಯಾಗುವುದ್ದಲ್ಲದೆ ನಮ್ಮ ಸುತ್ತಾ-ಮುತ್ತಲ್ಲಿನ ಪ್ರಾಣಿ ಪಕ್ಷಿಗಳಿಗೂ ಸಹಾ ತೊಂದರೆಯಾಗಲಿದೆ ಅವುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ, ಮಕ್ಕಳು ಪಟಾಕಿಯನ್ನು ಹಚ್ಚುವಾಗ ಪೋಷಕರ ಸಹಾಯವನ್ನು ಪಡೆಯಿರಿ ನೀವೇ ಪಟಾಕಿಯನ್ನು ಹಚ್ಚುವಂತ ಕಾರ್ಯಕ್ಕೆ ಹೋಗಬೇಡಿ ಈ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಣೆಯನ್ನು ಮಾಡಿ ಎಂದು ಮಕ್ಕಳಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಕಾರ್ಯದರ್ಶಿ ಸುರೇಶ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಶಾಂತ ಕುಮಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯರಾದ ನಾಜೀಮಾ ಸ್ವಾಲೇಹ, ಪ್ರೌಢ ಶಾಲಾ ಮುಖ್ಯಸ್ಥರಾದ ಜನಕರೆಡ್ಡಿ, ಶಾಲೆಯ ಆಡಳಿತ ಮಂಡಳಿ, ಭೋದಕ ಹಾಗೂ ಭೋದಕೇತರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲೆಯ ಮಕ್ಕಳು ದೀಪಾವಳಿಯ ಹಬ್ಬದ ಅಂಗವಾಗಿ ದೀಪದ ಹಾಡುಗಳಿಗೆ ನೃತ್ಯವನ್ನು ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now