Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರಿನ ಮಠದ ಹಿಂಭಾಗ ಕೃಷಿ ಹೊಂಡಕ್ಕೆ ಬಿದ್ದು ಮಕ್ಕಳು ಸಾವು..!

Facebook
Twitter
Telegram
WhatsApp

 

ನೀರಿರುವ ಕೆರೆ, ಹೊಳೆ ಈ ಥರದ ಜಾಗದಲ್ಲೆಲ್ಲಾ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಫೋಷಕರು ಸೇರಿದಂತೆ ಶಾಲೆಗಳಲ್ಲೂ ಕಿವಿ ಮಾತು ಹೇಳುತ್ತಾರೆ. ಆದರೂ ನೀರಿನಿಂದ ಪ್ರಾಣ ಕಳೆದುಕೊಳ್ಳುವ ಮಕ್ಕಳ ಸಂಖ್ಯೆ ಮುಂದುವರೆಯುತ್ತಲೆ ಇರುತ್ತದೆ. ಇದೀಗ ತುಮಕೂರಿನ ಸಿದ್ಧಗಂಗಾ ಮಠದ ಇಬ್ಬರು ಮಕ್ಕಳು ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಡನೆ ನಡೆದಿದೆ.

ಕೈ ತೊಳೆಯುವುದಕ್ಕೆಂದು ಹೋದಾಗ ಈ ದುರ್ಘಟನೆ ನಡೆದಿದೆ. ಕೃಷಿ ಹೊಂಡದಲ್ಲಿ ಬಿದ್ದು ನಾಲ್ವರು ಮೃತ ಪಟ್ಟಿದ್ದಾರೆ. ಸಿದ್ಧಗಂಗಾ ಮಠದ ಹಿಂಭಾಗದಲ್ಲಿ ನೀರಿನ ಕಟ್ಟೆಯಲ್ಲಿ ಈ ದುರ್ಘಟನೆ ನಡೆದಿದೆ. 11 ವರ್ಷದ ಶಂಕರ್, 11 ವರ್ಷದ ಹರ್ಷಿತಾ, 33 ವರ್ಷದ ಲಕ್ಷ್ಮೀ, 40 ವರ್ಷದ ಮಹದೇವಪ್ಪ ಮೃತಪಟ್ಟವರು.

ಮೃತ ಪಟ್ಟ ಇಬ್ಬರು ಮಕ್ಕಳು ಮಠದಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೈತೊಳೆಯಲೆಂದು ಕೃಷಿ ಹೊಂಡಕ್ಕೆ ತೆರಳುದ್ದಾರೆ. ಕಾಲು ಜಾರಿ ಬಿದ್ದಿದ್ದು ಪೋಷಕರ ಗಮನಕ್ಕೂ ಬಂದಿದೆ. ಮಕ್ಕಳನ್ನು ರಕ್ಷಿಸಲು ಹೋಗಿ ಪೋಷಕರು ನೀರು ಪಾಲಾಗಿದ್ದಾರೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಬಂದಿದ್ದು, ಅಗ್ನಿಶಾಮಕ ಸಿಬ್ಬಂದಿಗೂ ವಿಷಯ ಮುಟ್ಟಿಸಿ, ಸದ್ಯ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!