Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳಿಗೆ ದುಶ್ಚಟಗಳ ಬಗ್ಗೆ ಜಾಗೃತಿ ಅವಶ್ಯ : ಮೂರ್ತಿ

---Advertisement---

ಸುದ್ದಿಒನ್, ಹೊಸದುರ್ಗ. ಜ. 04 : ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾದಕ ವ್ಯಸನಗಳು ಮತ್ತು ದುಶ್ಚಟಗಳ ಬಗ್ಗೆ ಅದರಿಂದಾಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಭಾರತ ಸೇವಾದಳ ತಾಲೂಕು ಅಧ್ಯಕ್ಷರಾದ ಮತ್ತು ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎಂ.ಆರ್‌.ಸಿ ಮೂರ್ತಿರವರು ಅಭಿಪ್ರಾಯಪಟ್ಟರು.

ಶನಿವಾರ ಹೊಸದುರ್ಗ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ ಸೇವಾದಳವು ಹಮ್ಮಿಕೊಂಡಿದ್ದ ಸೇವಾದಳ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಮಕ್ಕಳು ಬೀಡಿ ಸಿಗರೇಟು ಗುಟ್ಕಾ ತಂಬಾಕಿನಂತಹ ವ್ಯಸನಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಇದರಿಂದ ಅವರ ಆರೋಗ್ಯದ ಬಗ್ಗೆ ದುಷ್ಪರಿಣಾಮ ಬೀರಲಿದೆ ಇದೇ ಅಭ್ಯಾಸವು ಮುಂದೆ ಅವರು ಯುವಕರಾದಾಗ ಮಧ್ಯ ವ್ಯಸನಿ ಯಾಗುತ್ತಾರೆ. ಇದರಿಂದ ಸಮಾಜಕ್ಕೆ ಮತ್ತು ಅವರ ಕುಟುಂಬಕ್ಕೆ ಕಂಟಕವಾಗುತ್ತದೆ ಎಂದು ತಿಳಿಸಿದರು. ಇದರ ಬಗ್ಗೆ ಜಾಗೃತಿ ಮೂಡಿಸಲು ಮಕ್ಕಳಿಗೆ ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತು ಪ್ರಬಂಧ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಗಳನ್ನು ನಡೆಸಿ ವಿಜೇತ ಮಕ್ಕಳಿಗೆ ಬಹುಮಾನ ನೀಡಲಾಗುವುದೆಂದು ತಿಳಿಸಿದರು.

ವಲಯ ಸಂಘಟಕರದ ಅಣ್ಣಯ್ಯನವರು ಪ್ರಾಸ್ತಾವಿಕವಾಗಿ ಮಾತನಾಡಿ ಸೇವಾದಳದ ಅಮೃತ ಮಹೋತ್ಸವ ಮತ್ತು ಸಪ್ತಾಹದ ಕಾರ್ಯಕ್ರಮಗಳನ್ನ ಜಿಲ್ಲಾ ದ್ಯಂತ ನಡೆಸಿರುವ ಬಗ್ಗೆ ತಿಳಿಸಿದರು. ಕಾಲೇಜಿನ ಹಿರಿಯ ಶಿಕ್ಷಕರಾದ ಹರೀಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

 

ಶಿಕ್ಷಕರಾದ ರವಿಕುಮಾರ್ ಶಿವಶಂಕರ್ ಮಂಜುನಾಥ್ ಕೃಷ್ಣಮೂರ್ತಿ ಭಾರತಮ್ಮ ಉಪಸ್ಥಿತರಿದ್ದರು. ತಾಲೂಕು ಅಧಿನಾಯಕರಾದ ಮಹಾಂತೇಶವರು ಸರ್ವರನ್ನು ಸ್ವಾಗತಿಸಿ ತಾಲೋಕಿನಲ್ಲಿ ನಡೆದ ಸೇವಾದಳ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪ್ರಮೀಳಾರವರು ವಂದಿಸಿದರು ನಾಗಮಣಿ ಅವರು ನಿರೂಪಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now