Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೋಷಕರ ಶ್ರಮಕ್ಕೆ ಮಕ್ಕಳೂ ಸಹ ತಕ್ಕ ಪ್ರತಿಫಲವನ್ನು ನೀಡಬೇಕು : ಡಿ.ಬಸವರಾಜ್

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ಹಿರಿಯರ ಮಾರ್ಗದರ್ಶನಗಳು ಮನುಕುಲದ ಭವಿಷ್ಯಕ್ಕೆ ಉತ್ತಮ ಅಡಿಪಾಯವಾಗಿದೆ. ಅವರು ನೆರವೇರಿಸಿಕೊಂಡು ಬಂದ ಆಚಾರ ವಿಚಾರಗಳನ್ನು ನಾವೆಂದಿಗೂ ಮರೆಯಬಾರದು. ಪ್ರಬುದ್ಧಮಾನಕ್ಕೆ ಬಂದ ಇಂದಿನ ಯುವಪೀಳಿಗೆ ಬಹುತೇಕ ಸರ್ಕಾರಿ ಶಾಲೆಗಳಿಂದ ಬಂದವರೇ ಆಗಿದ್ದಾರೆ. ಅಂಥವರು ಸಮಾಜದ ಯಾವುದೇ ಸ್ಥಾನದಲ್ಲಿದ್ದರೂ ಸರ್ಕಾರಿ ಶಾಲಾ ಮಕ್ಕಳ ಮೂಲಸೌಕರ್ಯಗಳತ್ತ ಗಮನಹರಿಸಬೇಕು.

ಸರ್ಕಾರಿ ಶಾಲಾಮಕ್ಕಳ ಪೋಷಕರು ಕೂಲಿನಾಲಿ ಮಾಡಿ ಮಕ್ಕಳ ಉತ್ತಮ ಭವಿಷ್ಯಕ್ಕೆ ಶ್ರಮಿಸುತ್ತಾರೆ. ಆ ಪೋಷಕರ ಶ್ರಮಕ್ಕೆ ಮಕ್ಕಳೂ ಸಹ ತಕ್ಕ ಪ್ರತಿಫಲವನ್ನು ನೀಡಬೇಕು ಎಂದು ಆರ್ಥಿಕ ಯುವಚಿಂತಕ ಡಿ.ಬಸವರಾಜ್ ತಿಳಿಸಿದರು.

ನಗರದ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ದಿ:28-08-2025 ರಂದು ಬೆಳಿಗ್ಗೆ 10-30ಕ್ಕೆ ಶ್ರೀ.ಬಿ.ದೇವರಾಜ ಕ್ರೀಡಾ ಸಾಂಸ್ಕøತಿಕ ಟ್ರಸ್ಟ್, ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಪಠ್ಯಾಧಾರಿತ ಸಾಂಸ್ಕøತಿಕ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿಗೂ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು, ಕಾಂಪೋಂಡು, ಪಾಠೋಪಕರಣಗಳು ಮತ್ತು ಪೀಠೋಪಕರಣಗಳ ಅವಶ್ಯಕತೆಯಿದೆ. ಆ ಮುಗ್ಧ ಮಕ್ಕಳ ಅವಶ್ಯಕತೆಗಳನ್ನು ಪೂರೈಸಬೇಕು. ದೊಡ್ಡಪೇಟೆಯ ಗಲ್ಲಿಯೊಂದಕ್ಕೆ ನಮ್ಮ ತಂದೆಯವರ ಬಿ.ದೇವರಾಜ ರಸ್ತೆ ಎಂದು ಹೆಸರಿಟ್ಟಿದ್ದಾರೆ. ಅವರ ಹೆಸರಲ್ಲಿ ನಗರದಲ್ಲಿ ನಿರಂತರವಾಗಿ ಉಪಯುಕ್ತ ಕಾರ್ಯಕ್ರಮಗಳನ್ನು ನಡೆಸಲು ಉತ್ಸುಕರಾಗಿದ್ದೇವೆ. ಇದಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಪ್ರೋತ್ಸಾಹ ನೀಡಬೇಕು ಎಂದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು ಕನ್ನಡನಾಡಿನ ಸಾಹಿತ್ಯ ಮತ್ತು ಸಾಂಸ್ಕøತಿಕ ಜಗತ್ತನ್ನು ಮಕ್ಕಳಿಗೆ ತಿಳಿಸಬೇಕು. ಶಾಲಾ ಮಕ್ಕಳ ಪಠ್ಯಗಳನ್ನು ಆಧರಿಸಿ ಗದ್ಯ ಮತ್ತು ಪದ್ಯಗಳನ್ನು ಸಾಂಸ್ಕøತಿಕವಾಗಿ ಪರಿಚಯಿಸುತ್ತಿರುವುದು ಹೆಚ್ಚು ಅರ್ಥಪೂರ್ಣವಾಗಿದೆ. ಇಂದಿನ ಈ ಕಾರ್ಯಕ್ರಮದ ರೂಪುರೇಷೆಗಳು ಪ್ರತಿ ಸರ್ಕಾರಿ ಶಾಲೆಗಳಲ್ಲಿ ಕಾರ್ಯಗತವಾಗಬೇಕು ಎಂದರು.

ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದು ಮಾತನಾಡಿ ನಗರದ ಬಹುತೇಕ ರಸ್ತೆಗಳಿಗೆ ಗಣ್ಯವ್ಯಕ್ತಿಗಳ ಹೆಸರಿಟ್ಟಿದ್ದಾರೆ ಅವರ ಆದರ್ಶ ಮತ್ತು ಆಶೋತ್ತರಗಳನ್ನು ದೇಶ ಕಟ್ಟುವ ಭವಿಷ್ಯದ ಪೀಳಿಗೆಗೆ ಪಠ್ಯದ ಜೊತೆಗೆ ಪರಿಚಯಿಸಿದರೆ ಬೋಧನೆ ಮತ್ತಷ್ಟು ಪರಿಣಾಮಕಾರಿಯಾಗುತ್ತದೆ ಎಂದರು.

ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಟಿ.ಷಣ್ಮುಖಪ್ಪ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಬಿ.ವಿಮಲಾಕ್ಷಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿದರು. ಯೋಗ ಚಿಕಿತ್ಸಕ ಎಂ.ಬಿ.ಮುರುಳಿ, ಆಯುರ್ವೇದ ತಜ್ಞವೈದ್ಯ ಡಾ.ಲಿಂಗದೊರೆ, ಜಿ.ಎಂ.ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ವರುಣ್, ಉದ್ಯಮಿ ಜಿ.ಎಂ.ಮಂಜುನಾಥ್, ಸಹಶಿಕ್ಷಕರಾದ ಪಿ.ಬಿ.ಅನುಸೂಯ, ಟಿ.ಎನ್.ಶೋಭ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...