Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಉರ್ದು ಶಾಲೆಯಲ್ಲಿ ಮಕ್ಕಳು ಅಸ್ವಸ್ಥ ಪ್ರಕರಣ, ಮುಖ್ಯ ಶಿಕ್ಷಕಿ ಅಮಾನತು : ಡಿಡಿಪಿಐ ಆದೇಶ

---Advertisement---

 

 

ಚಿತ್ರದುರ್ಗ ಸೆ. 14 : ಶಾಲಾ ಮಕ್ಕಳ ಬಿಸಿಯೂಟ ಪೂರೈಕೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಕೆ. ರವಿಶಂಕರ ರೆಡ್ಡಿ ಅವರು ಆದೇಶಿಸಿದ್ದಾರೆ.

ಚಿತ್ರದುರ್ಗದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಪಿ.ಎಂ. ಪೋಷಣ್ ಯೋಜನೆಯಡಿ ಸರ್ಕಾರಿ ಉರ್ದು ಶಾಲೆಯ 110 ಮಕ್ಕಳಿಗೆ ಹಾಗೂ ಮೌಲಾನಾ ಆಜಾದ್ ಶಾಲೆಯ 150 ಮಕ್ಕಳಿಗೆ ಸೆ. 12 ರಂದು ಮಧ್ಯಾಹ್ನ ಬಿಸಿಯೂಟ (ಅನ್ನ-ಸಾಂಬಾರ್) ಜೊತೆಗೆ ಶೇಂಗಾ ಚಿಕ್ಕಿ ವಿತರಿಸಲಾಗಿತ್ತು.  ಬಳಿಕ ಮಧ್ಯಾಹ್ನ 03. 30 ರ ನಂತರ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 4 ಮಕ್ಕಳು ಹಾಗೂ ಮೌಲಾನಾ ಆಜಾದ್ ಶಾಲೆಯ 03 ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿ ವಾಂತಿ ಮಾಡಿಕೊಂಡು, ಅಸ್ವಸ್ಥರಾಗಿರುತ್ತಾರೆ.

ಇಲಾಖೆಯ ನಿರ್ದೇಶನದಂತೆ ಶಾಲಾ ಮಕ್ಕಳಿಗೆ ಮೊಟ್ಟೆ ಅಥವಾ ಮಕ್ಕಳು ಇಚ್ಛಿಸಿದಲ್ಲಿ ಬಾಳೆಹಣ್ಣು ನೀಡಬೇಕಿರುತ್ತದೆ, ಮೊಟ್ಟೆ ಬಾಳೆಹಣ್ಣು ಇಚ್ಛಿಸದ ಮಕ್ಕಳಿಗೆ ಶೇಂಗಾ ಚಿಕ್ಕಿ ನೀಡಬಹುದಾಗಿರುತ್ತದೆ.  ಆದರೆ ಸರ್ಕಾರಿ ಉರ್ದು ಶಾಲೆಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಬದಲಿಗೆ ಗುಣಮಟ್ಟವಲ್ಲದ ಶೇಂಗಾ ಚಿಕ್ಕಿ ನೀಡಿದ್ದು, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗಲು ಕಾರಣವಾಗಿರುತ್ತದೆ.  ಪಿ.ಎಂ. ಪೋಷಣ್ ಅಭಿಯಾನದಡಿ ಮಕ್ಕಳಿಗೆ ಬಿಸಿಯೂಟ ವಿತರಣೆ ಸಂಬಂಧ ಪಾಲಿಸಬೇಕಾಗಿರುವ ನಿಯಮಗಳು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಇಲಾಖಾ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಲವು ಬಾರಿ ಮಾರ್ಗದರ್ಶನ ನೀಡಲಾಗಿರುತ್ತದೆ.  ಆದಾಗ್ಯೂ ಕರ್ತವ್ಯದಲ್ಲಿ ನಿರ್ಲಕ್ಷತೆ ಹಾಗೂ ವಹಿಸಿದ ಕೆಲಸವನ್ನು ನಿರ್ವಹಿಸಲು ಬೇಜವಾಬ್ದಾರಿತನ ತೋರಿರುವುದು ಕಂಡುಬಂದಿದ್ದು, ಈ ಬಗ್ಗೆ, ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು.  ಆದರೆ, ನೋಟಿಸ್‍ಗೆ ಯಾವುದೇ ಲಿಖಿತ ಉತ್ತರ ಸಲ್ಲಿಸಿರುವುದಿಲ್ಲ.

ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ ರೆಡ್ಡಿ ಅವರು ಆದೇಶಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...