Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉರ್ದು ಶಾಲೆಯಲ್ಲಿ ಮಕ್ಕಳು ಅಸ್ವಸ್ಥ ಪ್ರಕರಣ, ಮುಖ್ಯ ಶಿಕ್ಷಕಿ ಅಮಾನತು : ಡಿಡಿಪಿಐ ಆದೇಶ

Facebook
Twitter
Telegram
WhatsApp

 

 

ಚಿತ್ರದುರ್ಗ ಸೆ. 14 : ಶಾಲಾ ಮಕ್ಕಳ ಬಿಸಿಯೂಟ ಪೂರೈಕೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಕೆ. ರವಿಶಂಕರ ರೆಡ್ಡಿ ಅವರು ಆದೇಶಿಸಿದ್ದಾರೆ.

ಚಿತ್ರದುರ್ಗದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಪಿ.ಎಂ. ಪೋಷಣ್ ಯೋಜನೆಯಡಿ ಸರ್ಕಾರಿ ಉರ್ದು ಶಾಲೆಯ 110 ಮಕ್ಕಳಿಗೆ ಹಾಗೂ ಮೌಲಾನಾ ಆಜಾದ್ ಶಾಲೆಯ 150 ಮಕ್ಕಳಿಗೆ ಸೆ. 12 ರಂದು ಮಧ್ಯಾಹ್ನ ಬಿಸಿಯೂಟ (ಅನ್ನ-ಸಾಂಬಾರ್) ಜೊತೆಗೆ ಶೇಂಗಾ ಚಿಕ್ಕಿ ವಿತರಿಸಲಾಗಿತ್ತು.  ಬಳಿಕ ಮಧ್ಯಾಹ್ನ 03. 30 ರ ನಂತರ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 4 ಮಕ್ಕಳು ಹಾಗೂ ಮೌಲಾನಾ ಆಜಾದ್ ಶಾಲೆಯ 03 ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿ ವಾಂತಿ ಮಾಡಿಕೊಂಡು, ಅಸ್ವಸ್ಥರಾಗಿರುತ್ತಾರೆ.

ಇಲಾಖೆಯ ನಿರ್ದೇಶನದಂತೆ ಶಾಲಾ ಮಕ್ಕಳಿಗೆ ಮೊಟ್ಟೆ ಅಥವಾ ಮಕ್ಕಳು ಇಚ್ಛಿಸಿದಲ್ಲಿ ಬಾಳೆಹಣ್ಣು ನೀಡಬೇಕಿರುತ್ತದೆ, ಮೊಟ್ಟೆ ಬಾಳೆಹಣ್ಣು ಇಚ್ಛಿಸದ ಮಕ್ಕಳಿಗೆ ಶೇಂಗಾ ಚಿಕ್ಕಿ ನೀಡಬಹುದಾಗಿರುತ್ತದೆ.  ಆದರೆ ಸರ್ಕಾರಿ ಉರ್ದು ಶಾಲೆಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಬದಲಿಗೆ ಗುಣಮಟ್ಟವಲ್ಲದ ಶೇಂಗಾ ಚಿಕ್ಕಿ ನೀಡಿದ್ದು, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗಲು ಕಾರಣವಾಗಿರುತ್ತದೆ.  ಪಿ.ಎಂ. ಪೋಷಣ್ ಅಭಿಯಾನದಡಿ ಮಕ್ಕಳಿಗೆ ಬಿಸಿಯೂಟ ವಿತರಣೆ ಸಂಬಂಧ ಪಾಲಿಸಬೇಕಾಗಿರುವ ನಿಯಮಗಳು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಇಲಾಖಾ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಲವು ಬಾರಿ ಮಾರ್ಗದರ್ಶನ ನೀಡಲಾಗಿರುತ್ತದೆ.  ಆದಾಗ್ಯೂ ಕರ್ತವ್ಯದಲ್ಲಿ ನಿರ್ಲಕ್ಷತೆ ಹಾಗೂ ವಹಿಸಿದ ಕೆಲಸವನ್ನು ನಿರ್ವಹಿಸಲು ಬೇಜವಾಬ್ದಾರಿತನ ತೋರಿರುವುದು ಕಂಡುಬಂದಿದ್ದು, ಈ ಬಗ್ಗೆ, ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು.  ಆದರೆ, ನೋಟಿಸ್‍ಗೆ ಯಾವುದೇ ಲಿಖಿತ ಉತ್ತರ ಸಲ್ಲಿಸಿರುವುದಿಲ್ಲ.

ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ ರೆಡ್ಡಿ ಅವರು ಆದೇಶಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!