Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಪಾನಿಪೂರಿ ತಿಂದ ಮಕ್ಕಳು ಅಸ್ವಸ್ಥ : ಪಾನಿಯನ್ನು ಪರೀಕ್ಷೆಗೆ ಕಳುಹಿಸಿದ ಅಧಿಕಾರಿಗಳು

---Advertisement---

ದಾವಣಗೆರೆ: ಪಾನಿಪೂರಿ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಪಾನಿಪೂರಿ ಕೂಡ ಆರೋಗ್ಯಕ್ಕೆ ಒಳ್ಳೆಯದ್ದಲ್ಲ, ಪಾನಿಪೂರಿ ಮಾಡಲು ಬಳಸುವ ನೀರು ಶುದ್ಧತೆ ಇರಲ್ಲ ಎಂದೇ ಹಲವು ಬಾರಿ ದೂರುಗಳು ಬಂದರು, ಪಾನಿಪೂರಿ ಪ್ರಿಯರು ಮಾತ್ರ ಕಡಿಮೆಯಾಗಿಲ್ಲ. ಇದೀಗ ದಾವಣಗೆರೆಯಲ್ಲಿ ಪಾನಿಪೂರಿ ತಿಂದ 19‌ ಮಕ್ಕಳು ಅಸ್ವಸ್ಥರಾಗಿದ್ದಾರೆ.

ಹರಿಹರ ತಾಲೂಕಿನ ಮಲೆಬೆನ್ನೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಪಟ್ಟಣದ ಕೆಲವೆಡೆ ಪಾನಿಪೂರಿ ಮಾಡಲಾಗುತ್ತಿತ್ತು. ಅದನ್ನು ತಿಂದ ಮಕ್ಕಳು ವಾಂತಿ – ಭೇದಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಮಕ್ಕಳನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಸದ್ಯ ಮಕ್ಕಳನ್ನು ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಆದರೆ ಈ 19 ಮಕ್ಕಳಲ್ಲಿ ಒಂದು ಮಗುವಿಗೆ ತೀರಾ ಅಸ್ವಸ್ಥತೆಯಾಗಿದೆ. ಮಗುವನ್ನು ಐಸಿಯು ನಲ್ಲಿ ಇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಘಟನೆ ಸಂಬಂಧ ಪಾನಿಪೂರಿಗಾಗಿ ಬಳಕೆ ಮಾಡಿದ್ದ ನೀರನ್ನು ಪರೀಕ್ಷಡ ಕಳುಹಿಸಿದ್ದಾರೆ. ಹರಿಹರ ತಹಶೀಲ್ದಾರ್​ ಗುರುಬಸಯ್ಯ, ಹರಿಹರ ಟಿಎಚ್ ಓ, ಮಲೆಬೆನ್ನೂರ ಪಟ್ಟಣದ ಮುಖ್ಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮಲೆಬೆನ್ನೂರು ಪಟ್ಟಣದಲ್ಲಿ ಪಾನಿಪುರಿ ಮಾರಾಟ ಮಾಡದಂತೆ ಕಟ್ಟುನಿಟ್ಟಿನಿ ಸೂಚನೆ ಹೊರಡಿಸಿದ್ದಾರೆ. ಮಲೆಬೆನ್ನೂರು ಪಟ್ಟಣದಲ್ಲಿ 25ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಮನೆ ಮನೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...