Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರುರವರ ಜನ್ಮದಿನಾಚರಣೆ ಅಂಗವಾಗಿ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಎಂಟು ದಿನಗಳ ಕಾಲ ನಡೆದ ಅಂತರ ಶಾಲಾ ಮಟ್ಟದ ಸಾಂಸ್ಕøತಿಕ ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಮತ್ತು ಪದಕಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ ಮಾತನಾಡಿ ಮಕ್ಕಳೆಂದರೆ ದೇವರ ಸಮಾನ, ಏಕೆಂದರೆ ಅವರಲ್ಲಿ ಕಪಟತನ, ಮೋಸ ಇರುವುದಿಲ್ಲ. ಯಾವ ಮನೆಯಲ್ಲಿ ಮಗು ಕುಣಿದು ಕುಪ್ಪಳಿಸಿ ಆನಂದಿಸುತ್ತದೋ ಅಂತಹ ಮನೆಯಲ್ಲಿ ಸಂಭ್ರಮವಿರುತ್ತದೆ. ನೆಹರುರವರಿಗೆ ಮಕ್ಕಳೆಂದರೆ ಎಲ್ಲಿಲ್ಲದ ಪ್ರೀತಿ. ಅದಕ್ಕಾಗಿ ನೆಹರು ಹುಟ್ಟುಹಬ್ಬವನ್ನು ಮಕ್ಕಳ ದಿನಾಚರಣೆಯನ್ನಾಗಿ ಪ್ರತಿ ವರ್ಷವೂ ಆಚರಿಸಲಾಗುವುದೆಂದರು.

ಸಾಂಸ್ಕøತಿಕ ಚಟುವಟಿಕೆ ಹಾಗೂ ಕ್ರೀಡೆಗಳಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಬಹುದು, ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಆಡಬೇಕು. ಸೋತವರು ಮುಂದೆ ಗೆಲ್ಲಲು ಶ್ರಮಿಸಬೇಕೆಂದು ತಿಳಿಸಿದರು.

ಬಿ.ಇ.ಡಿ.ಕಾಲೇಜು ಪ್ರಾಂಶುಪಾಲರಾದ ಡಾ.ಅನಂತರಾಮು, ಪದವಿಪೂರ್ವ ಕಾಲೇಜು ಪ್ರಾಚಾರ್ಯರಾದ ಕೇಶವಮೂರ್ತಿ, ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment