ಚಿತ್ರದುರ್ಗ, (ಮಾ.24) : ರೋಟರಿ ಕ್ಲಬ್ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ನಿರಂತವಾಗಿ ತೊಡಗುತ್ತಿದೆ. ಇಲ್ಲಿ ಅಧಿಕಾರ ಆಸೆ, ಸ್ವಾರ್ಥಕ್ಕಿಂತ ಸೇವೆ ಮಾಡುವುದು ಮುಖ್ಯವಾಗಿದೆ. ರೋಟರಿ ಕ್ಲಬ್ ಜಗತ್ತಿನ ಅತಿ ದೊಡ್ಡ ಸೇವಾ ಸಂಸ್ಥೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಈ ಅರುಣ್ಕುಮಾರ್ ಹೇಳಿದರು.
ನಗರದ ಜೆ.ಸಿ.ಆರ್. ಬಡಾವಣೆಯ ಸರ್ಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಚಿನ್ನೂಲಾದ್ರಿ ರೋಟರಿ ಕ್ಲಬ್ ಅಧ್ಯಕ್ಷ ಈ.ಅರುಣ್ಕುಮಾರ್ ಮಗಳಾದ ಕುಮಾರಿ ಧನ್ವಿಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪೆನ್ಸಿಲ್,ಬಣ್ಣದ ಪೆನ್ಸಿಲ್ ಸೆಟ್ಗಳನ್ನು ವಿತರಿಸಿ, ಸಿಹಿ ಹಂಚುವ ಮೂಲಕ ವಿಶಿಷ್ಠವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ರೋ ಶ್ರೀನಿವಾಸ್ ಮಳಲಿ, ಕ್ಲಬ್ ನ ಮಾರ್ಗದರ್ಶಕರಾದ ರೋ ಟಿ.ಕೆ. ನಾಗರಾಜ್ ಜಂಟಿ ಕಾರ್ಯದರ್ಶಿ ರೋ. ಶಂಕರಪ್ಪ, ಸದಸ್ಯರಾದ ರೋ. ಗುರುಮೂರ್ತಿ, ರೆಡ್ ಕ್ರಾಸ್ ನ ಕಾರ್ಯದರ್ಶಿ ಮಜಹರ್ ಉಲ್ಲಾ, ನಿವೃತ್ತ ತಾಲೂಕ್ ದೈಹಿಕ ಶಿಕ್ಷಣಧಿಕಾರಿಗಳಾದ ನೀಲಕಂಠಚಾರ್ಯ, ಮುಖ್ಯಶಿಕ್ಷಕರಾದ ಶಿವರಾಮ್ ರವರು ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…