Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜೂನ್.21 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು  ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಪ್ರ್ರಾಮುಖ್ಯತೆಯನ್ನು  ಕುರಿತು ಸಂಸ್ಥೆಯ ಕಾರ್ಯದರ್ಶಿಗಳಾದ ಬಿ. ವಿಜಯ ಕುಮಾರ್ ರವರು  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಇಂದು ವಿಶ್ವ ಮಟ್ಟದಲ್ಲಿ ಯೋಗ ದಿನಾಚರಣೆ ವಿಶೇಷ ದಿನವನ್ನಾಗಿ ಮಾಡುವಲ್ಲಿ ಭಾರತೀಯರಾದ ನಾವೆಲ್ಲರೂ ಅರ್ಹರು, ಅಲ್ಲದೇ  ಮಕ್ಕಳು ಯೋಗವನ್ನು  ಕೇವಲ ಈ ದಿನಕಷ್ಷೇ ಸೀಮಿತಗೊಳಿಸದೇ ವರ್ಷದ ಮುನ್ನೂರ ಅರವತ್ತು ದಿನಗಳಲ್ಲಿ  ಯೋಗದ ವಿವಿಧ ಆಸನಗಳಲ್ಲಿ ಸಕ್ರಿಯರಾಗುವುದರಿಂದ ನಿಮ್ಮ ಆರೋಗ್ಯ ಸುಧಾರಣೆಯಲ್ಲಿರುತ್ತದೆ, ಅಲ್ಲದೇ  ಕಲಿಕೆಗೂ ಪೂರಕವಾಗಿರುತ್ತದೆ. ಎಂದು ತಿಳಿಸಿದರು.

ಯೋಗ ದಿನದ ಅಂಗವಾಗಿ ಯೋಗ ಶಿಕ್ಷಕರಾದ ಮುರಳಿಯವರು ಮಕ್ಕಳಿಗೆ ಯೋಗ ತರಬೇತಿಯನ್ನು ನೀಡುವುದರ ಜೊತೆಗೆ ಯೋಗ ದಿನಾಚರಣೆಯ ಅಂಗವಾಗಿ  ವಿವಿಧ ಆಸನಗಳನ್ನು ಮಕ್ಕಳಿಂದ ಮಾಡಿಸುವುದರ ಮೂಲಕ ದಿನವನ್ನು ಯಶಸ್ವಿಗೊಳಿಸಿದರು. ಮಕ್ಕಳಿಗೆ ಕಳೆದ 3 ದಿನಗಳಿಂದ ತರಬೇತಿ ನೀಡಿದ ಯೋಗ ತರಬೇತುದಾರ ಮುರಳಿ ಅವರಿಗೆ ಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯ ಕುಮಾರ್ ಅವರು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ  ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ ಎನ್.ಜಿ, ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ ಸಂಸ್ಥೆಯ ನಿರ್ದೇಶಕರಾದ ಶ್ರೀ.ಎಸ್.ಎಂ ಪೃಥ್ವೀಶ್, ಹಾಗೂ ಎಲ್ಲಾ ಶಿಕ್ಷಕ/ಶಿಕ್ಷಕೇತರ  ವೃಂದ, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಶಿಕ್ಷಕಿಯಾದ ಸುಚಿತಾ ಬಿ ಎಸ್ ಸ್ವಾಗತಿಸಿ, ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಾಸ್ಟೆಲ್ ಪ್ರವೇಶ ವಿಳಂಬ : ಚಿತ್ರದುರ್ಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 03 : ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನವನ್ನು

ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ

ಚಿತ್ರದುರ್ಗ. ಜುಲೈ.03:   ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸರ್ಕಾರದ ಒಂದು ಪ್ರತಿಷ್ಠಿತ ಸಂಸ್ಥೆಯಾಗಿದ್ದು, ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಗೆ ಹೆಸರುವಾಸಿಯಾದ ಆಸ್ಪತ್ರೆಯಾಗಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಹಾಗೂ ಹೊರ ರಾಜ್ಯಗಳ ಸಾರ್ವಜನಿಕರು ಕ್ಯಾನ್ಸರ್ ಚಿಕಿತ್ಸೆಗೆ ಕಿದ್ವಾಯಿ

ಜುಲೈ 5 ರಿಂದ 11 ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 02 : ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ

error: Content is protected !!