Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜೂನ್.21 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು  ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಪ್ರ್ರಾಮುಖ್ಯತೆಯನ್ನು  ಕುರಿತು ಸಂಸ್ಥೆಯ ಕಾರ್ಯದರ್ಶಿಗಳಾದ ಬಿ. ವಿಜಯ ಕುಮಾರ್ ರವರು  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಇಂದು ವಿಶ್ವ ಮಟ್ಟದಲ್ಲಿ ಯೋಗ ದಿನಾಚರಣೆ ವಿಶೇಷ ದಿನವನ್ನಾಗಿ ಮಾಡುವಲ್ಲಿ ಭಾರತೀಯರಾದ ನಾವೆಲ್ಲರೂ ಅರ್ಹರು, ಅಲ್ಲದೇ  ಮಕ್ಕಳು ಯೋಗವನ್ನು  ಕೇವಲ ಈ ದಿನಕಷ್ಷೇ ಸೀಮಿತಗೊಳಿಸದೇ ವರ್ಷದ ಮುನ್ನೂರ ಅರವತ್ತು ದಿನಗಳಲ್ಲಿ  ಯೋಗದ ವಿವಿಧ ಆಸನಗಳಲ್ಲಿ ಸಕ್ರಿಯರಾಗುವುದರಿಂದ ನಿಮ್ಮ ಆರೋಗ್ಯ ಸುಧಾರಣೆಯಲ್ಲಿರುತ್ತದೆ, ಅಲ್ಲದೇ  ಕಲಿಕೆಗೂ ಪೂರಕವಾಗಿರುತ್ತದೆ. ಎಂದು ತಿಳಿಸಿದರು.

ಯೋಗ ದಿನದ ಅಂಗವಾಗಿ ಯೋಗ ಶಿಕ್ಷಕರಾದ ಮುರಳಿಯವರು ಮಕ್ಕಳಿಗೆ ಯೋಗ ತರಬೇತಿಯನ್ನು ನೀಡುವುದರ ಜೊತೆಗೆ ಯೋಗ ದಿನಾಚರಣೆಯ ಅಂಗವಾಗಿ  ವಿವಿಧ ಆಸನಗಳನ್ನು ಮಕ್ಕಳಿಂದ ಮಾಡಿಸುವುದರ ಮೂಲಕ ದಿನವನ್ನು ಯಶಸ್ವಿಗೊಳಿಸಿದರು. ಮಕ್ಕಳಿಗೆ ಕಳೆದ 3 ದಿನಗಳಿಂದ ತರಬೇತಿ ನೀಡಿದ ಯೋಗ ತರಬೇತುದಾರ ಮುರಳಿ ಅವರಿಗೆ ಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯ ಕುಮಾರ್ ಅವರು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ  ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ ಎನ್.ಜಿ, ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ ಸಂಸ್ಥೆಯ ನಿರ್ದೇಶಕರಾದ ಶ್ರೀ.ಎಸ್.ಎಂ ಪೃಥ್ವೀಶ್, ಹಾಗೂ ಎಲ್ಲಾ ಶಿಕ್ಷಕ/ಶಿಕ್ಷಕೇತರ  ವೃಂದ, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಶಿಕ್ಷಕಿಯಾದ ಸುಚಿತಾ ಬಿ ಎಸ್ ಸ್ವಾಗತಿಸಿ, ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!