ಸುದ್ದಿಒನ್, ಚಿತ್ರದುರ್ಗ, ಜೂನ್.21 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಪ್ರ್ರಾಮುಖ್ಯತೆಯನ್ನು ಕುರಿತು ಸಂಸ್ಥೆಯ ಕಾರ್ಯದರ್ಶಿಗಳಾದ ಬಿ. ವಿಜಯ ಕುಮಾರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಇಂದು ವಿಶ್ವ ಮಟ್ಟದಲ್ಲಿ ಯೋಗ ದಿನಾಚರಣೆ ವಿಶೇಷ ದಿನವನ್ನಾಗಿ ಮಾಡುವಲ್ಲಿ ಭಾರತೀಯರಾದ ನಾವೆಲ್ಲರೂ ಅರ್ಹರು, ಅಲ್ಲದೇ ಮಕ್ಕಳು ಯೋಗವನ್ನು ಕೇವಲ ಈ ದಿನಕಷ್ಷೇ ಸೀಮಿತಗೊಳಿಸದೇ ವರ್ಷದ ಮುನ್ನೂರ ಅರವತ್ತು ದಿನಗಳಲ್ಲಿ ಯೋಗದ ವಿವಿಧ ಆಸನಗಳಲ್ಲಿ ಸಕ್ರಿಯರಾಗುವುದರಿಂದ ನಿಮ್ಮ ಆರೋಗ್ಯ ಸುಧಾರಣೆಯಲ್ಲಿರುತ್ತದೆ, ಅಲ್ಲದೇ ಕಲಿಕೆಗೂ ಪೂರಕವಾಗಿರುತ್ತದೆ. ಎಂದು ತಿಳಿಸಿದರು.
ಯೋಗ ದಿನದ ಅಂಗವಾಗಿ ಯೋಗ ಶಿಕ್ಷಕರಾದ ಮುರಳಿಯವರು ಮಕ್ಕಳಿಗೆ ಯೋಗ ತರಬೇತಿಯನ್ನು ನೀಡುವುದರ ಜೊತೆಗೆ ಯೋಗ ದಿನಾಚರಣೆಯ ಅಂಗವಾಗಿ ವಿವಿಧ ಆಸನಗಳನ್ನು ಮಕ್ಕಳಿಂದ ಮಾಡಿಸುವುದರ ಮೂಲಕ ದಿನವನ್ನು ಯಶಸ್ವಿಗೊಳಿಸಿದರು. ಮಕ್ಕಳಿಗೆ ಕಳೆದ 3 ದಿನಗಳಿಂದ ತರಬೇತಿ ನೀಡಿದ ಯೋಗ ತರಬೇತುದಾರ ಮುರಳಿ ಅವರಿಗೆ ಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯ ಕುಮಾರ್ ಅವರು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ ಎನ್.ಜಿ, ಐಸಿಎಸ್ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ ಸಂಸ್ಥೆಯ ನಿರ್ದೇಶಕರಾದ ಶ್ರೀ.ಎಸ್.ಎಂ ಪೃಥ್ವೀಶ್, ಹಾಗೂ ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಶಿಕ್ಷಕಿಯಾದ ಸುಚಿತಾ ಬಿ ಎಸ್ ಸ್ವಾಗತಿಸಿ, ನಿರೂಪಿಸಿದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…