Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ; ಕೋರ್ಟ್​ ಆದೇಶ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 24 : ತಾಲ್ಲೂಕಿನ ಮದಕರಿಪುರ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ, ಬಾಲ್ಯ ವಿವಾಹವಾಗಿ, ಆಕೆಯ ವಿರುದ್ದ ಲೈಂಗಿಕ ದೌರ್ಜನ್ಯ ನಡೆಸಿದ್ದ 27 ವರ್ಷದ ಯುವಕನಿಗೆ ಚಿತ್ರದುರ್ಗ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) 20 ವರ್ಷ ಕಠಿಣ ಸಜೆ ಮತ್ತು ರೂ.10,000/- ದಂಡ ವಿಧಿಸಿದೆ.

ಮದಕರಿಪುರ ಗ್ರಾಮದ 27 ವರ್ಷದ ವಸಂತಕುಮಾರ್ ಶಿಕ್ಷೆಗೆ ಗುರಿಯಾದ ಆರೋಪಿ. ಜುಲೈ 2020 ರಂದು ಅದೇ ಊರಿನ ಅಪ್ರಾಪ್ತ ವಯಸ್ಸಿನ ಬಾಕಿಯನ್ನು ಬಲವಂತವಾಗಿ ಅಪಹರಣ ಮಾಡಿಕೊಂಡು ಹೋಗಿ, ಬಾಲ್ಯ ವಿವಾಹವಾಗಿ, ಆಕೆಯ ಇಚ್ಛೆಯ ವಿರುದ್ಧವಾಗಿ ಅತ್ಯಾಚಾರ ಮಾಡಿದ್ದನು. ಈ ಬಗ್ಗೆ ಚಿತ್ರದುರ್ಗ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೋಲಿಸ್ ಇನ್ಸ್‌ಪೆಕ್ಟರ್‌ರವರಾದ.ಪಿ.ಪ್ರಸಾದ್ ತನಿಖೆಯನ್ನು ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೋಕ್ಸೋ), ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್ ಅವರು ಆರೋಪಿ ವಸಂತ ಕುಮಾರ್‌ಗೆ 20 ವರ್ಷ ಕಠಿಣ ಸಜೆ ಮತ್ತು ರೂ.10,000/- ದಂಡ ವಿಧಿಸಿ ಇಂದು (ದಿನಾಂಕ:24-7-2026 ರಂದು) ತೀರ್ಪು ನೀಡಿರುತ್ತಾರೆ ಮತ್ತು ಪ್ರಕರಣದ ನೊಂದ ಬಾಲಕಿಗೆ ರೂ.4,00,000/-ಪರಿಹಾರ ನೀಡಲು ಆದೇಶ ನೀಡಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕರಾಗಿ ಹೆಚ್.ಆರ್.ಜಗದೀಶ್, ಇವರು ಪಾದ ಮಂಡಿಸಿರುತ್ತಾರೆ.

ಈ ಪ್ರಕರಣ ತನಿಖಾ ಸಹಾಯಕರು ಹಾಗೂ ನ್ಯಾಯಾಲಯದ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಯ ಸೇವೆಯನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು (ಐ.ಪಿ.ಎಸ್) ಅವರು ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ : ಬರ, ಭದ್ರಾ ಮೇಲ್ದಂಡೆ, ಗ್ಯಾರಂಟಿ ರಿಪೋರ್ಟ್ ರೆಡಿ ಇಟ್ಟುಕೊಳ್ಳಿ: ಸಿಎಂ ಸಭೆಗೂ ಮುನ್ನ ಅಧಿಕಾರಿಗಳಿಗೆ ಡಿಸಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ : ಬೀದಿಗಿಳಿದು ಸೂಕ್ತ ಉತ್ತರ ನೀಡಲಿದ್ದೇವೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಎಂ.ಎಲ್.ಸಿ.ನವೀನ್ ಮುನ್ನೆಚ್ಚರಿಕೆ

ಶಾಸಕ ​ಟಿ. ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ‘ಯುವ ಸೇನೆ’ ಪಟ್ಟು: ಬರಗೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ!

ಚಿತ್ರದುರ್ಗದಲ್ಲಿ ‘ದುರ್ಗೋತ್ಸವ’ ಆಚರಣೆಗೆ ಅಗ್ರಹ: ಸರ್ಕಾರದ ಗಮನಸೆಳೆಯಲು ಗಣೇಶ್ ಏಕಾಂಗಿ ಪ್ರತಿಭಟನೆ!

ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತರ ಆಗ್ರಹ: ರೈತ ಸಂಘ-ಹಸಿರುಸೇನೆಯಿಂದ ಪ್ರತಿಭಟನೆ

ನೀಟ್ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ಚಿತ್ರದುರ್ಗದಲ್ಲಿ ವಕೀಲರ ಪ್ರತಿಭಟನೆ