Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ 25ನೇ ವರ್ಷದ ಶ್ರಾವಣ ಪೂಜೆ; ಯೋಗ-ಧ್ಯಾನ ಮಂದಿರ ಉದ್ಘಾಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 09 : ಚಂದ್ರವಳ್ಳಿ ವಾಯುವಿಹಾರಿಗಳ ಬಳಗದಿಂದ ಹುಲಿಗುಂದಿ ಸಿದ್ದೇಶ್ವರಸ್ವಾಮಿಯ 25 ನೇ ವರ್ಷದ ಶ್ರಾವಣ ಮಾಸದ ವಿಶೇಷ ಪೂಜೆ ಚಂದ್ರವಳ್ಳಿ ವಾಯುವಿಹಾರಿಗಳ ಯೋಗ ಮತ್ತು ಧ್ಯಾನ ದಾಸೋಹ ಮಂದಿರದ ಉದ್ಘಾಟನೆ ನೆರವೇರಿತು.

ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರಸ್ವಾಮಿ ಹಾಗೂ ಡಾ.ಬಸವಪ್ರಭು ಸ್ವಾಮೀಜಿಯವರಿಗೆ ಚಂದ್ರವಳ್ಳಿ ವಾಯುವಿಹಾರಿಗಳ ಬಳಗದವರು ಹಲವು ಬೇಡಿಕೆಗಳುಳ್ಳ ಮನವಿಯನ್ನು ಸಲ್ಲಿಸಿದರು.

ಮಾಜಿ ಶಾಸಕ ಎಸ್.ಕೆ.ಬಸವರಾಜನ್, ವಾಯುವಿಹಾರಿಗಳ ಬಳಗದ ಗೌರವಾಧ್ಯಕ್ಷ ಫೈಲ್ವಾನ್ ತಿಪ್ಪೇಸ್ವಾಮಿ, ಅಧ್ಯಕ್ಷ ಜಯಣ್ಣ ಎನ್, ಉಪಾಧ್ಯಕ್ಷ ಬಸವರಾಜಪ್ಪ
ಕಾರ್ಯದರ್ಶಿ ಕುಳೇನೂರು ಗೌಡ್ರು, ಖಜಾಂಚಿ ಡಾ.ಚನ್ನಕೇಶವ ಸಿ, ಸಹ ಕಾರ್ಯದರ್ಶಿ ಜಯರಾಮ್ ಕೆ, ಕಾನೂನು ಸಲಹೆಗಾರ ಬಿ.ಅಶೋಕ್‍ಕುಮಾರ್, ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ, ನಿರ್ದೇಶಕರುಗಳಾದ ಚಿದಾನಂದಪ್ಪ ಕೆ.ಎಸ್, ಹೊರಕೆರೆ ರಂಗಯ್ಯ ಕೆ.ಬಿ, ಚಂದ್ರಶೇಖರ್ ಬಿ.ಎಸ್, ಡಾ.ತೋಯಿಜಾಕ್ಷಿಬಾಯಿ, ಜಯದೇವಯ್ಯ ಪಿ.ಎಂ, ಚನ್ನಬಸಪ್ಪ ಕೆ.ಜಿ, ರಾಜೇಂದ್ರಸಿಂಗ್, ಎಸ್.ಎನ್.ರವಿಕುಮಾರ್, ಸುನೀಲ್‍ಕುಮಾರ್ ಪಿ, ರಾಜಶೇಖರಪ್ಪ ಟಿ.ಕೆ. ಎ.ಪಿ.ಎಂ.ಸಿ.ಹಮಾಲರ ಸಂಘದ ಅಧ್ಯಕ್ಷ ಬಿ.ಬಸವರಾಜ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಸಹಸ್ರಾರು ಭಕ್ತರು ಹುಲಿಗುಂದಿ ಸಿದ್ದೇಶ್ವರಸ್ವಾಮಿಯ ದರ್ಶನ ಪಡೆದು ಶ್ರದ್ದಾ ಭಕ್ತಿಯನ್ನು ಸಮರ್ಪಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now